ಬೆಂಗಳೂರು: ನಗರದ ವಿವಿಧೆಡೆ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ನಗರದ ಹೈಗ್ರೌಂಡ್ಸ್, ಶೇಷಾದ್ರಿಪುರಂ, ಉಪ್ಪಾರಪೇಟೆ, ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ಹೈಗ್ರೌಂಡ್ಸ್, ಶೇಷಾದ್ರಿಪುರಂ, ಉಪ್ಪಾರಪೇಟೆ, ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಡಾ.ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಯುತ್ತಿದ್ದು, ಈ ಕುರಿತ ಖಚಿತ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಐವರು ಆರೋಪಿಗಳನ್ನು ಬಂಧಿಸಲಾಗಿದ್ದು, 5 ಲಕ್ಷರೂ ವನ್ನು ಜಪ್ತಿ ಮಾಡಲಾಗಿದೆ. ಐವರು ಆರೋಪಿಗಳು ಮೊಬೈಲ್ ಮುಖಾಂತರ ಬೆಟ್ಟಿಂಗ್ ನಡೆಸುತ್ತಿದ್ದರು. ಪಂದ್ಯ ನಡೆಯುವ ವೇಳೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ, ಆರೋಪಿಗಳ ವಿರುದ್ಧ ಪ್ರತ್ಯೇಕ ಠಾಣೆಗಳಲ್ಲಿ ಕೇಸ್ ದಾಖಲು ಮಾಡಲಾಗಿದೆ.
Advertisement