ಬೆಳಗಾವಿ: ಕೋರ್ಟ್ ಆವರಣದಲ್ಲೇ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ; ಕಾಲು ಕತ್ತರಿಸಿದ ನಿವೃತ್ತ ಯೋಧ

ಬೈಲಹೊಂಗಲದ ನ್ಯಾಯಾಲಯದ ಆವರಣದಲ್ಲೇ ನಿವೃತ್ತ ಯೋಧನೊಬ್ಬ ತನ್ನ ಪತ್ನಿಯ ಮೇಲೆ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಆಕೆಯ ಕಾಲು ಕತ್ತರಿಸಿದ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಳಗಾವಿ: ಬೈಲಹೊಂಗಲದ ನ್ಯಾಯಾಲಯದ ಆವರಣದಲ್ಲೇ ನಿವೃತ್ತ ಯೋಧನೊಬ್ಬ ತನ್ನ ಪತ್ನಿಯ ಮೇಲೆ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಆಕೆಯ ಕಾಲು ಕತ್ತರಿಸಿದ ಘಟನೆ ನಡೆದಿದೆ.

ನನಗುಂಡಿಕೊಪ್ಪದ ನಿವೃತ್ತ ಸೈನಿಕ ಶಿವಾನಂದ ಅಡಕಿ ಎಂಬಾತ ಪತ್ನಿ ಜಯಮಾಲಾ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಆಕೆಯ ಕಾಲನ್ನೇ ಕತ್ತರಿಸಿದ್ದಾನೆ. 11 ವರ್ಷಗಳ ಹಿಂದೆ ಧಾರವಾಡ ಜಿಲ್ಲೆಯ ವರೂರ್ ಗ್ರಾಮದ ಜಯಮಾಲಾರನ್ನು ಸೈನಿಕ ಶಿವಾನಂದ ಮದುವೆಯಾಗಿದ್ದ. ಆದರೆ ಹಣಕಾಸಿನ ವಿಚಾರಕ್ಕೆ ಪತಿ-ಪತ್ನಿಯ ಮಧ್ಯೆ ಕಲಹ ಇತ್ತು ಎನ್ನಲಾಗಿದೆ. 

ಈ ಹಿನ್ನೆಲೆಯಲ್ಲಿ ಬೈಲಹೊಂಗಲ ದಿವಾಣಿ ನ್ಯಾಯಾಲಯದಲ್ಲಿ ವಿಚಾರಣೆ ಇತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆ ಹಾಜರಾಗಲು ಕೋರ್ಟ್ ಗೆ ಬಂದ ಪತ್ನಿಯ ಮೇಲೆ ಶಿವಪ್ಪ ಅಡಕಿ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಹಲ್ಲೆಯಲ್ಲಿ ಜಯಮಾಲಾ ತೀವ್ರವಾಗಿ ಗಾಯಗೊಂಡಿದ್ದಾರೆ. ಹೀಗಾಗಿ, ಆಕೆಯನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಂತರ ಆರೋಪಿ ಶಿವಾನಂದ ಅಡಕಿ ಪೊಲೀಸರಿಗೆ ಶರಣಾಗಿದ್ದಾನೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com