ಬೆಂಗಳೂರು: ಕೆಜಿ ಹಳ್ಳಿಯಲ್ಲಿ ಕಾಲೇಜು ಯುವಕನಿಗೆ ಚೂರಿ ಇರಿದು ಬರ್ಬರ ಹತ್ಯೆ

ಬೆಂಗಳೂರಿನ ಕೆಜಿ ಹಳ್ಳಿಯಲ್ಲಿ ಕಾಲೇಜು ಯುವಕನಿಗೆ ಚೂರಿ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. 
ಹತ್ಯೆಯಾದ ಅರ್ಬಾಜ್
ಹತ್ಯೆಯಾದ ಅರ್ಬಾಜ್

ಬೆಂಗಳೂರು: ಬೆಂಗಳೂರಿನ ಕೆಜಿ ಹಳ್ಳಿಯಲ್ಲಿ ಕಾಲೇಜು ಯುವಕನಿಗೆ ಚೂರಿ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. 

ಮೃತ ವಿದ್ಯಾರ್ಥಿಯನ್ನು 18 ವರ್ಷದ ಅರ್ಬಾಜ್ ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನ ದುಷ್ಕರ್ಮಿಗಳು ಅರ್ಬಾಜ್ ಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. 

ಅರ್ಬಾರ್ಜ್ ಬೆಂಗಳೂರಿನ ಪ್ರಾವಿನ್ಸ್ ಕಾಲೇಜಿನ ಪಿಯು ವಿದ್ಯಾರ್ಥಿಯಾಗಿದ್ದು ನಿನ್ನೆ ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆದಿದ್ದು ಈ ವೇಳೆ ಸಹ ವಿದ್ಯಾರ್ಥಿಗಳ ಜೊತೆ ಜಗಳವಾಗಿತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ಇಂದು ಅರ್ಬಾಜ್ ನ ಕೊಲೆಯಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. 

ಕೆಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ನಡೆಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com