ರಾಯಚೂರು: ಅನೈತಿಕ ಸಂಬಂಧ ಶಂಖೆ ಹಿನ್ನಲೆ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಪತಿ!

ಅನೈತಿಕ ಸಂಬಂಧ ಶಂಖೆ ಹಿನ್ನಲೆ ಪತಿಯೇ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ರಾಯಚೂರು: ಅನೈತಿಕ ಸಂಬಂಧ ಶಂಖೆ ಹಿನ್ನಲೆ ಪತಿಯೇ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. 

ಲಿಂಗಸಗೂರು ತಾಲೂಕಿನ ಗುಡದಾಳದಲ್ಲಿ ಘಟನೆ ನಡೆದಿದ್ದು ಮೃತ ಮಹಿಳೆಯನ್ನು 26 ವರ್ಷದ ರೇಣುಕಾ ಎಂದು ಗುರುತಿಸಲಾಗಿದೆ. ಪತ್ನಿಯನ್ನು ಕೊಲೆ ಮಾಡಿದ ನಂತರ ಆರೋಪಿ ಜೆಟ್ಟೆಪ್ಪ ತನ್ನ ಮಕ್ಕಳ ಸಮೇತ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. 

ರೇಣುಕಾ ಅದೇ ಗ್ರಾಮದ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಆರೋಪ ಕೇಳಿಬಂದಿತ್ತು. ಈ ವಿಚಾರವಾಗಿ ಆಗಾಗ ಪತಿ-ಪತ್ನಿ ಜೊತೆ ಜಗಳ ನಡೆಯುತ್ತಿತ್ತು. ಮತ್ತೆ ಇಂದು ಬೆಳಗ್ಗೆ ಸಹ ಇಬ್ಬರ ನಡುವೆ ಜಗಳವಾಗಿದ್ದು ಕೋಪಗೊಂಡ ಜೆಟ್ಟೆಪ್ಪ ಕೊಡಲಿಯಿಂದ ಕೊಚ್ಚಿ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. 

ಕೊಲೆ ಪ್ರಕರಣ ಸಂಬಂಧ ಲಿಂಗಸುಗೂರು ಪೊಲೀಸರು ಜೆಟ್ಟೆಪ್ಪನನ್ನು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com