ದಾವಣಗೆರೆ: ಚಿರತೆ ದಾಳಿಗೆ ಮಹಿಳೆ ಬಲಿ

ಚಿರತೆ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನ್ಯಾಮತಿ ತಾಲೂಕಿನ ಫಲವನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ದಾವಣಗೆರೆ: ಚಿರತೆ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನ್ಯಾಮತಿ ತಾಲೂಕಿನ ಫಲವನಹಳ್ಳಿ ಗ್ರಾಮದಲ್ಲಿ ನಡೆದಿದೆ. 

ಮೃತ ಮಹಿಳೆಯನ್ನು 55 ವರ್ಷದ ಕಮಲಾಬಾಯಿ ಜೀಕಾನಾಯ್ಕ ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಚಿರತೆ ಕಮಲಾಬಾಯಿ ಅವರ ಕುತ್ತಿಗೆಗೆ ಬಾಯಿ ಹಾಕಿ ಎಳೆದುಕೊಂಡು ಹೋಗಿದೆ. ಇದನ್ನು ನೋಡಿದ ಇತರ ಮಹಿಳೆಯರು ಕಿರುಚಾಡಿದ್ದಾರೆ. 

ನಂತರ ಚಿರತೆ ಕಮಲಾಬಾಯಿಯನ್ನು ಬಿಟ್ಟು ಓಡಿ ಹೋಗಿದೆ. ತೀವ್ರ ರಕ್ತಸ್ರಾವದಿಂದಾಗಿ ಅವರು ಅಲ್ಲದೆ ಮೃತಪಟ್ಟಿದ್ದಾರೆ. ಅರಣ್ಯ ಇಲಾಖೆಯ ಆರ್ಎಫ್ಒ ಚೇತನ, ಡಿಸಿ ಕಾಪಶಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com