ಶಾಲಾ ಬಸ್ ಮೇಲೆ ವಿದ್ಯುತ್ ತಂತಿ ಬಿದ್ದು ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

ನಿರ್ಮಲ್ ಜಿಲ್ಲೆಯ ಕುಂತಲ ಮಂಡಲದ ಕಲ್ಲೂರು ಗ್ರಾಮದ ಸಾಯಿಬಾಬಾ ದೇವಸ್ಥಾನದ ಬಳಿ ಗುರುವಾರ ಶಾಲಾ ಬಸ್ ಮೇಲೆ ವಿದ್ಯುತ್ ತಂತಿ ಬಿದ್ದು ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಅದಿಲಾಬಾದ್: ನಿರ್ಮಲ್ ಜಿಲ್ಲೆಯ ಕುಂತಲ ಮಂಡಲದ ಕಲ್ಲೂರು ಗ್ರಾಮದ ಸಾಯಿಬಾಬಾ ದೇವಸ್ಥಾನದ ಬಳಿ ಗುರುವಾರ ಶಾಲಾ ಬಸ್ ಮೇಲೆ ವಿದ್ಯುತ್ ತಂತಿ ಬಿದ್ದು ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ.

ಆದಿಲಾಬಾದ್ ಮೂಲದ ಖಾಸಗಿ ಸಂಸ್ಥೆಯ ಶಾಲಾ ಬಸ್ ಬಸರ ಸರಸ್ವತಿ ದೇವಸ್ಥಾನದಿಂದ ಕಲ್ಲೂರು ಸಾಯಿಬಾಬಾ ದೇವಸ್ಥಾನದ ಕಡೆಗೆ ಚಲಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಘಟನೆ ನಡೆದಾಗ ಬಸ್ ನಲ್ಲಿ 56 ಮಂದಿ ಇದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಮಕ್ಕಳನ್ನು ಚಿಕಿತ್ಸೆಗಾಗಿ ಭೈಂಸಾ ಏರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಇಬ್ಬರು ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಿದ ನಂತರ, ಎಲ್ಲಾ ವಿದ್ಯಾರ್ಥಿಗಳು ಮತ್ತು ಶಾಲಾ ಸಿಬ್ಬಂದಿ ಮತ್ತೊಂದು ವಾಹನದಲ್ಲಿ ಆದಿಲಾಬಾದ್‌ಗೆ ತೆರಳಿದರು. ಈ ಸಂಬಂಧ ಶಾಲೆಯ ಸಿಬ್ಬಂದಿ ಯಾವುದೇ ಪೊಲೀಸ್ ದೂರು ನೀಡಿಲ್ಲ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com