ತುಮಕೂರು: ಚಿರತೆ ದಾಳಿ, ಇಬ್ಬರು ಅಪ್ರಾಪ್ತ ಬಾಲಕರಿಗೆ ಗಾಯ

ತುಮಕೂರು ಜಿಲ್ಲೆಯಲ್ಲೂ ಚಿರತೆ ಉಪಟಳ ಹೆಚ್ಚಾಗಿದ್ದು, ಜನರು ಭೀತಿಗೊಂಡಿದ್ದಾರೆ. ಇಂದು ಮುಂಜಾನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಇರಕಸಂದ್ರ ಕಾಲೋನಿಯಲ್ಲಿ ಇಬ್ಬರು ಬಾಲಕರ ಮೇಲೆ ಚಿರತೆ ದಾಳಿ ಮಾಡಿದೆ.
ಗಾಯಗೊಂಡ ಬಾಲಕರು
ಗಾಯಗೊಂಡ ಬಾಲಕರು
Updated on

ತುಮಕೂರು: ತುಮಕೂರು ಜಿಲ್ಲೆಯಲ್ಲೂ ಚಿರತೆ ಉಪಟಳ ಹೆಚ್ಚಾಗಿದ್ದು, ಜನರು ಭೀತಿಗೊಂಡಿದ್ದಾರೆ. ಇಂದು ಮುಂಜಾನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಇರಕಸಂದ್ರ ಕಾಲೋನಿಯಲ್ಲಿ ಇಬ್ಬರು ಬಾಲಕರ ಮೇಲೆ ಚಿರತೆ ದಾಳಿ ಮಾಡಿದೆ.

ಬೆಳಗ್ಗೆ ಹಸುವಿನ ಹಾಲು ಕರೆಯಲೆಂದು ಕೊಟ್ಟಿಗೆಗೆ ಹೋದ ಸಂದರ್ಭದಲ್ಲಿ ಚಿರತೆ ದಾಳಿ ಮಾಡಿದೆ. ಕೂಡಲೇ ಬಾಲಕರನ್ನು ತುಮಕೂರಿನ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಒದಗಿಸಲಾಗಿದೆ.

ಕೆಲ ತಿಂಗಳ ಹಿಂದೆ ಇದೇ ತಾಲೂಕಿನ ವಜ್ಜನಕುರಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೋರಗಾನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಯಿಂದ ಕರುವೊಂದು ಸಾವನ್ನಪ್ಪಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com