ಬಂಡೀಪುರ: ಲಾರಿ ಡಿಕ್ಕಿಯಾಗಿ ಹೆಣ್ಣಾನೆ ಸಾವು

ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಲಾರಿ ಢಿಕ್ಕಿಯಾಗಿ ಹೆಣ್ಣಾನೆಯೊಂದು ಸಾವನ್ನಪ್ಪಿದೆ.
ಲಾರಿ ಢಿಕ್ಕಿಯಾಗಿ ಹೆಣ್ಣಾನೆ ಸಾವು
ಲಾರಿ ಢಿಕ್ಕಿಯಾಗಿ ಹೆಣ್ಣಾನೆ ಸಾವು
Updated on

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಲಾರಿ ಢಿಕ್ಕಿಯಾಗಿ ಹೆಣ್ಣಾನೆಯೊಂದು ಸಾವನ್ನಪ್ಪಿದೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಕೇರಳಕ್ಕೆ‌ ಹೋಗುವ ರಾಷ್ಟ್ರೀಯ ಹೆದ್ದಾರಿ 766ಯಲ್ಲಿ (ಎನ್ ಎಚ್ 766) ಲಾರಿ ಡಿಕ್ಕಿ ಹೊಡೆದು ಹೆಣ್ಣಾನೆಯೊಂದು ಮಂಗಳವಾರ ರಾತ್ರಿ ಮೃತಪಟ್ಟಿದೆ. ಮಂಗಳವಾರ ರಾತ್ರಿ 8 ಗಂಟೆ ಸುಮಾರಿನಲ್ಲಿ ಈ ಘಟನೆ ನಡೆದಿದ್ದು, ಕೇರಳ ಕಡೆಯಿಂದ ಬರುತ್ತಿದ್ದ ತಮಿಳುನಾಡು ನೋಂದಣಿಯ ಲಾರಿ ಆನೆಗೆ ಡಿಕ್ಕಿ ಹೊಡೆದಿದೆ.

ಮದ್ದೂರು ವಲಯದಲ್ಲಿ ಈ ಅಪಘಾತ ಸಂಭವಿಸಿದ್ದು, ರಾತ್ರಿ 9 ಗಂಟೆಯ ನಂತರ ಈ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ನಿಷೇಧವಿದ್ದು, ಅದಕ್ಕೂ ‌ಮೊದಲೇ ಈ ಘಟನೆ ನಡೆದಿದೆ ಎಂದು ಅರಣ್ಯ‌ ಇಲಾಖೆ ಸಿಬ್ಬಂದಿ ತಿಳಿಸಿದ್ದಾರೆ.

ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧವಾದ ಬಳಿಕ ವಾಹನ ಅಪಘಾತದಲ್ಲಿ ದೊಡ್ಡ ಪ್ರಾಣಿಯೊಂದು ಮೃತಪಡುತ್ತಿರುವುದು ಇದೇ ಮೊದಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com