ಮತದಾರರ ಮಾಹಿತಿ ಕಳವು ಪ್ರಕರಣ: ತಾಂತ್ರಿಕ ದಾಖಲೆಗಳ ಪರಿಶೀಲನೆಗೆ ಪೊಲೀಸರು ಮುಂದು!

ಮತದಾರರ ಮಾಹಿತಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಸಲ್ಲಿಸಿರುವ ತಾಂತ್ರಿಕ ದಾಖಲೆಗಳ ಪರಿಶೀಲಿಸಲು ಹಲಸೂರು ಗೇಟ್ ಪೊಲೀಸರು ಮುಂದಾಗಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಮತದಾರರ ಮಾಹಿತಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಸಲ್ಲಿಸಿರುವ ತಾಂತ್ರಿಕ ದಾಖಲೆಗಳ ಪರಿಶೀಲಿಸಲು ಹಲಸೂರು ಗೇಟ್ ಪೊಲೀಸರು ಮುಂದಾಗಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜೈಲು ಸೇರಿರುವ ಬಿಬಿಎಂಪಿ ಕಂದಾಯ ಅಧಿಕಾರಿಗಳಿಗೆ ಸೆಕ್ಷನ್ 439ರ ಅಡಿಯಲ್ಲಿ ಜಾಮೀನು ಪಡೆಯುವುದು ಕಷ್ಟವಾಗಲಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾ ತಂಡದಲ್ಲಿರುವ ಅಧಿಕಾರಿಯೊಬ್ಬರು ಮಾತನಾಡಿ, ಶುಕ್ರವಾರ ಜಾಮೀನು ಆದೇಶದ ವಿಚಾರಣೆ ನಡೆಯುತ್ತಿದ್ದಾಗ ಹಲಸೂರು ಗೇಟ್ ಪೊಲೀಸ್ ಸ್ಥಳದಲ್ಲಿರಲಿಲ್ಲ. ಅಮಾನತುಗೊಂಡಿರುವ ಡಿಸಿ ವಿರುದ್ಧ ಆದೇಶ ಹೊರಬಿದ್ದ ಬಳಿಕ ಅವರ ಬೆಂಬಲಿತ ತಂಡ ಸ್ಥಳದಿಂದ ಹೊರನಡೆದಿತ್ತು ಎಂದು ಹೇಳಿದ್ದಾರೆ.

ಜೈಲು ಸೇರಿರುವ ಅಧಿಕಾರಿಗಳಿಗೆ ಐಪಿಸಿ ಸೆಕ್ಷನ್ 438 ರ ಅಡಿಯಲ್ಲಿ ನಿರೀಕ್ಷಣಾ ಜಾಮೀನನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ತಿರಸ್ಕರಿಸಿದೆ. ಆದರೀಗ ಅಧಿಕಾರಿಗಳು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಏತನ್ಮಧ್ಯೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಬಿಬಿಎಂಪಿ ಆಡಳಿತ ಆಯುಕ್ತ ಎಸ್.ರಂಗಪ್ಪ ಅವರು ಸಲ್ಲಿಸಿರುವ ಸಾಕ್ಷ್ಯಗಳ ಬಗ್ಗೆಯೂ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com