ಬಿಎಂಟಿಸಿ ನೌಕರರಿಗೆ ಗುಡ್ ನ್ಯೂಸ್: 5 ಲಕ್ಷ ರೂ. ಆರೋಗ್ಯ ವಿಮೆ ಘೋಷಿಸಿದ ಸಚಿವ ಶ್ರೀರಾಮುಲು

ರಾಜ್ಯ ಸರ್ಕಾರ ಬಿಎಂಟಿಸಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ಆರೋಗ್ಯ ರಕ್ಷಾ ಯೋಜನೆಯಡಿ ಬಿಎಂಟಿಸಿ 35 ಸಾವಿರ ನೌಕರರಿಗೆ 5 ಲಕ್ಷ ರೂ. ಆರೋಗ್ಯ ವಿಮೆ ಸೌಲಭ್ಯ ನೀಡುವುದಾಗಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು ಬುಧವಾರ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಜ್ಯ ಸರ್ಕಾರ ಬಿಎಂಟಿಸಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ಆರೋಗ್ಯ ರಕ್ಷಾ ಯೋಜನೆಯಡಿ ಬಿಎಂಟಿಸಿ 35 ಸಾವಿರ ನೌಕರರಿಗೆ 5 ಲಕ್ಷ ರೂ. ಆರೋಗ್ಯ ವಿಮೆ ಸೌಲಭ್ಯ ನೀಡುವುದಾಗಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು ಬುಧವಾರ ಘೋಷಿಸಿದ್ದಾರೆ. 

ಆರೋಗ್ಯ ರಕ್ಷಾ ಯೋಜನೆಯಡಿ ಬಿಎಂಟಿಸಿ ನೌಕರರು ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆ ಪಡೆಯಬಹುದು. ಬಿಎಂಟಿಸಿಯ 35 ಸಾವಿರ ಸಿಬ್ಬಂದಿಗೆ ಆರೋಗ್ಯ ರಕ್ಷಾ ಯೋಜನೆಯಡಿ 5 ಲಕ್ಷ ರೂ. ಆರೋಗ್ಯ ವಿಮೆ ಸೌಲಭ್ಯ ನೀಡಲಾಗುವುದು ಎಂದು ಸಚಿವ ಶ್ರೀರಾಮುಲು ಮಾಹಿತಿ ನೀಡಿದ್ದಾರೆ. 

ಆಯುಷ್ಮಾನ್ ಯೋಜನೆಯಡಿಯಲ್ಲಿ ಸಾಸ್ತಾ ಎಂಬ ಯೋಜನೆ ಜಾರಿಗೆ ತರಲು ಸಾರಿಗೆ ನಿಗಮ ಮುಂದಾಗಿದೆ. ನಿಗಮದ ಸಿಬ್ಬಂದಿಗಳು ಹಾಗೂ ಕುಟುಂಬದವರು ಯಾವುದೇ ಅನಾರೋಗ್ಯಕ್ಕೊಳಗಾದ್ರೆ ಈ ಯೋಜನೆಯಡಿ ಅವರು ಖಾಸಗಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು. ಆರೋಗ್ಯ ಸಚಿವರು ಹಾಗೂ ಇಲಾಖೆ ಜೊತೆ ಈಗಾಗಲೇ ಬಿಎಂಟಿಸಿ ಅಧಿಕಾರಿಗಳು ಮಾತುಕತೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com