ಬಳ್ಳಾರಿ: ಸಾರಿಗೆ ಬಸ್ ಡಿಕ್ಕಿ ಮೂವರು ವಿದ್ಯಾರ್ಥಿಗಳ ದುರ್ಮರಣ

ಸಾರಿಗೆ ಬಸ್​ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬಳ್ಳಾರಿ ತಾಲೂಕಿನ ಹಲಕುಂದಿ ಬಳಿ ತಡರಾತ್ರಿ 2 ಗಂಟೆ ಸುಮಾರಿಗೆ ಸಂಭವಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬಳ್ಳಾರಿ: ಸಾರಿಗೆ ಬಸ್​ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬಳ್ಳಾರಿ ತಾಲೂಕಿನ ಹಲಕುಂದಿ ಬಳಿ ತಡರಾತ್ರಿ 2 ಗಂಟೆ ಸುಮಾರಿಗೆ ಸಂಭವಿಸಿದೆ. 

ಮೃತರನ್ನು ಎಮ್ಮಿಗನೂರಿನ 19 ವರ್ಷದ ಕನಕರಾಜು, ಮುರುಡಿ ಗ್ರಾಮದ 18 ವರ್ಷದ ಶಂಕರ, ಸಂಡೂರು ತಾಲೂಕಿನ ನಾಗೇನಹಳ್ಳಿಯ 22 ವರ್ಷದ ಹೊನ್ನೂರ ಮೃತ ದುರ್ದೈವಿಗಳು.

ವಿದ್ಯಾರ್ಥಿಗಳ ರಾತ್ರಿ ರಸ್ತೆ ದಾಟುವ ವೇಳೆ ಬೆಂಗಳೂರಿನಿಂದ ಜೇವರ್ಗಿಗೆ ಹೊರಟಿದ್ದ ಸಾರಿಗೆ ಬಸ್​ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

ಮೃತರು ಎಸ್​​​ಸಿ, ಎಸ್​​ಟಿ ಹಾಸ್ಟಲ್ ವಿದ್ಯಾರ್ಥಿಗಳಾಗಿದ್ದು ವಿದ್ಯಾರ್ಥಿಗಳು ಮಧ್ಯರಾತ್ರಿ ಹಲಕುಂದಿ ಬಳಿ ಯಾಕೆ ಹೋಗಿದ್ದರು ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಬಳ್ಳಾರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com