ಚನ್ನಪಟ್ಟಣ: ದಶಪಥ ಹೆದ್ದಾರಿಯಲ್ಲಿ ಅಪಘಾತ ಇಬ್ಬರ ಸಾವು; ತಿರುಪತಿಯಿಂದ ವಾಪಸಾಗುತ್ತಿದ್ದ ಟಿಟಿಗೆ ಕ್ಯಾಂಟರ್ ಡಿಕ್ಕಿ

ರಾಮನಗರ ಜಿಲ್ಲೆಯ ಚನ್ನಪಟ್ಟಣದ ದಶಪಥ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ರಸ್ತೆ ಅಪಘಾತವಾಗಿ ಸ್ಥಳದಲ್ಲೇ 3 ಜನರು ಸಾವನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಚನ್ನಪಟ್ಟಣ: ರಾಮನಗರ ಜಿಲ್ಲೆಯ ಚನ್ನಪಟ್ಟಣದ ದಶಪಥ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ರಸ್ತೆ ಅಪಘಾತವಾಗಿ ಸ್ಥಳದಲ್ಲೇ 3 ಜನರು ಸಾವನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ.

ತಿರುಪತಿಯಿಂದ ಹಿಂದಿರುಗುವಾಗ ಚನ್ನಪಟ್ಟಣದ ಮುದಗೆರೆ ಗೇಟ್ ಬಳಿ ಕ್ಯಾಂಟರ್‌ಗೆ ಟಿಟಿ ಡಿಕ್ಕಿಯಾಗಿದ್ದು, ಪರಿಣಾಮ ಟಿಟಿ ಮುಂಭಾಗ ಸಂಪೂರ್ಣ ಜಖಂ ಆಗಿದೆ.

ಮೃತರು ಕೃಷ್ಣ ಹಾಗೂ ಮಹೇಶ್. ಚಾಲಕನ ಸ್ಥಿತಿ ಗಂಭೀರವಾಗಿದ್ದು, ಇವರೆಲ್ಲ ಮಂಡ್ಯ ಜಿಲ್ಲೆಯ ಪಾಂಡವಪುರದ ಚಿಕ್ಕಾಡೆ ಗ್ರಾಮದವರು. ಸ್ಥಳಕ್ಕೆ ಸಂಚಾರಿ ಪೊಲೀಸರು ಆಗಮಿಸಿ, ಮೃತದೇಹಗಳು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಚಾಲಕ ನಿದ್ದೆಗಣ್ಣಿನಲ್ಲಿದ್ದ ಹಿನ್ನೆಲೆ ರಸ್ತೆ ಅಪಘಾತವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com