ಬೆಂಗಳೂರಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ: ಸ್ವಾಗತ ಕೋರಿದ ಸಿಎಂ ಬೊಮ್ಮಾಯಿ

ಎರಡು ದಿನಗಳ ಭೇಟಿಗಾಗಿ ಕೇಂದ್ರ ಗೃಹ ವ್ಯವಹಾರಗಳು ಮತ್ತು ಸಹಕಾರ ಸಚಿವ ಅಮಿತ್ ಶಾ ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದರು.
ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ ಸ್ವಾಗತಿಸಿದ ಮುಖ್ಯಮಂತ್ರಿ ಬೊಮ್ಮಾಯಿ
ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ ಸ್ವಾಗತಿಸಿದ ಮುಖ್ಯಮಂತ್ರಿ ಬೊಮ್ಮಾಯಿ
Updated on

ಬೆಂಗಳೂರು: ಎರಡು ದಿನಗಳ ಭೇಟಿಗಾಗಿ ಕೇಂದ್ರ ಗೃಹ ವ್ಯವಹಾರಗಳು ಮತ್ತು ಸಹಕಾರ ಸಚಿವ ಅಮಿತ್ ಶಾ ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದರು.

ವಾಯುಪಡೆಯ ವಿಶೇಷ ವಿಮಾನದಲ್ಲಿ ಯಲಹಂಕ ವಾಯುನೆಲೆಯಲ್ಲಿ ಬಂದಿಳಿದ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮತ್ತಿತರರು ಪುಷ್ಪ ಗುಚ್ಚ ನೀಡುವ ಮೂಲಕ ಮೂಲಕ ಬರಮಾಡಿಕೊಂಡರು.

ನಂತರ ರಸ್ತೆ ಮೂಲಕ ರೇಸ್ ಕೋರ್ಸ್ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ಗೆ ಅಮಿತ್ ಶಾ ತೆರಳಿದರು. ಅಲ್ಲಿ ವಾಸ್ತವ್ಯ ಹೂಡಿರುವ ಅಮಿತ್ ಶಾ, ನಾಳೆ ಮಂಡ್ಯದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲದೇ ಮದ್ದೂರಿನ ಗೆಜ್ಜಲಗೆರೆಯಲ್ಲಿ ಮೆಗಾ ಡೇರಿಯನ್ನು ಉದ್ಘಾಟಿಸಲಿದ್ದಾರೆ. ತದನಂತರ ಬೆಂಗಳೂರಿನಲ್ಲಿ ನಡೆಯಲಿರುವ ಸಹಕಾರ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com