ಬೆಂಗಳೂರು: ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನಿಸುತ್ತಿದ್ದ ಆರೋಪದ ಮೇರೆಗೆ ಆಂಧ್ರ ಪ್ರದೇಶ ಮೂಲದ ಮೂವರ ವಿರುದ್ಧ ಬೆಂಗಳೂರು ಪೊಲೀಸರು FIR ದಾಖಲಿಸಿಕೊಂಡಿದ್ದಾರೆ.
ಬೆಂಗಳೂರಿನ ಜೆ.ಜೆ.ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಹಿಂದೂಗಳನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನಿಸಿದ ಆರೋಪ ಮೇರೆಗೆ ಆಂಧ್ರ ಪ್ರದೇಶ ಮೂಲದ ವಿಜಯ್, ಶೃತಿ, ನೆಲ್ಸನ್ ವಿರುದ್ಧ ಜೆ.ಜೆ.ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮೂಲಗಳ ಪ್ರಕಾರ ವಿ.ಎಸ್. ಗಾರ್ಡನ್ನಲ್ಲಿ ಹಿಂದೂಗಳಿಗೆ ತೆಲುಗು ಭಾಷೆಯಲ್ಲಿದ್ದ ಏಸುಕ್ರಿಸ್ತನ ಕರಪತ್ರ ಹಂಚಿ ಹಣದ ಆಮಿಷವೊಡ್ಡಿ ಹಿಂದೂ ಧರ್ಮದ ಬಗ್ಗೆ ಅಪಪ್ರಚಾರ ಮಾಡಿ ಮತಾಂತರ ಮಾಡಲು ಯತ್ನ ನಡೆದಿದೆ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಮುಖಂಡರಾದ ಎಮ್ಎಲ್ ಶಿವಕುಮಾರ್, ಪವನ್ ಮತ್ತು ಹರ್ಷ ಮುತಾಲಿಕ್ ಮುಂತದಾವರು ದೂರು ನೀಡಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
Advertisement