ಕಾರವಾರ: ಭಾರೀ ಮಳೆ, ಜಿಲ್ಲೆಯ ಹಲವೆಡೆ ಜಲಾವೃತ!

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ಹಲವು ಸ್ಥಳಗಳು ಜಲಾವೃತಗೊಂಡಿವೆ. ಐಎನ್‌ಎಸ್ ಕದಂಬ ನೌಕಾನೆಲೆ ಬಳಿಯ ಚೆಂಡಿಯೆ ಗ್ರಾಮದಲ್ಲಿ ಅತಿ ಹೆಚ್ಚು ಮಳೆ ಸುರಿದಿದೆ. 
ರಾಷ್ಟ್ರೀಯ ಹೆದ್ದಾರಿ 66ರ ಚಿತ್ರ
ರಾಷ್ಟ್ರೀಯ ಹೆದ್ದಾರಿ 66ರ ಚಿತ್ರ
Updated on

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ಹಲವು ಸ್ಥಳಗಳು ಜಲಾವೃತಗೊಂಡಿವೆ. ಐಎನ್‌ಎಸ್ ಕದಂಬ ನೌಕಾನೆಲೆ ಬಳಿಯ ಚೆಂಡಿಯೆ ಗ್ರಾಮದಲ್ಲಿ ಅತಿ ಹೆಚ್ಚು ಮಳೆ ಸುರಿದಿದೆ. 

ಭಾರೀ ಮಳೆಯಿಂದ ಹಲವಾರು ಗ್ರಾಮಗಳು ಸಂಪರ್ಕ ಕಡಿತಗೊಂಡಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಕಾರವಾರ ಪಟ್ಟಣ ಹಾಗೂ ಹೊರವಲಯದಲ್ಲಿನ ಹಲವು ಕಾಲುವೆಗಳು, ಜಲಾಶಯಗಳು ತುಂಬಿ ಹರಿಯುತ್ತಿವೆ. ಶೇರವಾಡ ರೈಲು ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ವಾಹನಗಳು ನೀರಿನಲ್ಲಿಯೇ ಸಂಚರಿಸಿದವು. ಯಾವುದೇ ರೀತಿಯ ಘರ್ಷಣೆ ಸಂಭವಿಸದಂತೆ ಟ್ರಾಫಿಕ್ ಪೊಲೀಸರನ್ನು ನಿಯೋಜಿಸಲಾಗಿತ್ತು.

ಹೊನ್ನಾವರ ಅರಣ್ಯ ಪ್ರದೇಶದ ಗ್ರಾಮಗಳು ಹೊರ ಜಗತ್ತಿನ ಸಂಪರ್ಕವಿಲ್ಲದೆ ದ್ವೀಪಗಳಾಗಿ ಮಾರ್ಪಟ್ಟಿವೆ. ಅಘನಾಶಿನಿ,  ಗಂಗವಳ್ಳಿ ಮತ್ತು ಕಾಳಿ ನದಿಗಳಲ್ಲಿ ತೀವ್ರ ಒಳಹರಿವಿದೆ. ರಾಷ್ಟ್ರೀಯ ಹೆದ್ದಾರಿ ಜಲಾವೃತದೊಂದಿಗೆ  ಕಾರವಾರ ಬಳಿಯ ಬಿಣಗಾದಲ್ಲಿ ಹೆಚ್ಚಿನ ಸಮಸ್ಯೆ ಕಂಡುಬಂದಿತು. ಆಮೆಗತಿಯ ವಾಹನ ಸಂಚಾರದಿಂದ ಜನರು ಬಹಳ ಹೊತ್ತು ಕಾಯುವಂತಾಯಿತು. 

ಮಳೆಯಿಂದಾಗಿ 100 ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿದ್ದು, 14 ತೀವ್ರವಾಗಿ ಅಥವಾ ಸಂಪೂರ್ಣವಾಗಿ ಹಾನಿಗೊಳಗಾಗಿವೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ತಿಳಿಸಿದ್ದಾರೆ. ಐಎನ್‌ಎಸ್ ಕದಂಬ ನೌಕಾನೆಲೆ ಬಳಿಯಿರುವ ಚೆಂಡಿಯೆ ಗ್ರಾಮದಲ್ಲಿ ಗುರುವಾರ ರಾತ್ರಿ ಮತ್ತು ಶುಕ್ರವಾರದ ಆರಂಭದಲ್ಲಿ 260 ಮಿ.ಮೀ.ನಷ್ಟು ಮಳೆ ಸುರಿದಿದೆ. ಜಿಲ್ಲಾಡಳಿತದಿಂದ ಗುರುವಾರದಿಂದ ಎರಡು ಪರಿಹಾರ ಕೇಂದ್ರಗಳನ್ನು ಆರಂಭಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com