ಜಾತ್ಯಾತೀತತೆ ಎಂಬುದು ದೇಶದ ಪ್ರತಿಯೊಬ್ಬರಲ್ಲಿ ರಕ್ತಗತವಾಗಿಯೇ ಬಂದಿದೆ: ವೆಂಕಯ್ಯ ನಾಯ್ಡು

ಜಾತ್ಯತೀತತೆ ಮತ್ತು ಇತರರ ನಂಬಿಕೆಗಳ ಬಗ್ಗೆ ಸಹಿಷ್ಣುತೆ ಹೊಂದಿರುವುದು ಭಾರತೀಯ ನೈತಿಕತೆಯ ಪ್ರಮುಖ ಸಾರವಾಗಿದೆ. ದೇಶದ ಪ್ರತಿಯೊಬ್ಬರಲ್ಲಿಯೂ ಜಾತ್ಯತೀತತೆ ಎಂಬುದು ರಕ್ತಗತವಾಗಿಯೇ ಬರುತ್ತದೆ.
ವೆಂಕಯ್ಯ ನಾಯ್ಡು
ವೆಂಕಯ್ಯ ನಾಯ್ಡು
Updated on

ಬೆಂಗಳೂರು: ಜಾತ್ಯತೀತತೆ ಮತ್ತು ಇತರರ ನಂಬಿಕೆಗಳ ಬಗ್ಗೆ ಸಹಿಷ್ಣುತೆ ಹೊಂದಿರುವುದು ಭಾರತೀಯ ನೈತಿಕತೆಯ ಪ್ರಮುಖ ಸಾರವಾಗಿದೆ. ದೇಶದ ಪ್ರತಿಯೊಬ್ಬರಲ್ಲಿಯೂ ಜಾತ್ಯತೀತತೆ ಎಂಬುದು ರಕ್ತಗತವಾಗಿಯೇ ಬರುತ್ತದೆ. ಇದು ಯಾವುದೇ ಸರ್ಕಾರ ಮತ್ತು ಪಕ್ಷಕ್ಕೆ ಸೀಮಿತವಾಗಿಲ್ಲ ಎಂದು ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದಲ್ಲಿ ಶನಿವಾರ ಮೌಂಟ್‌ ಕಾರ್ಮೆಲ್‌ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸಂಸ್ಥೆಯ ವಜ್ರ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಭಾರತವು ಯಾವುದೇ ದೇಶಗಳ ಮೇಲೆ ದಾಳಿ ನಡೆಸದೆ ಸಹಿಷ್ಣುತಾ ಮನೋಭಾವದಿಂದ ಇರುವುದು ದೇಶದ ಹಿರಿಮೆ ಮತ್ತು ಶ್ರೀಮಂತಿಕೆಯಾಗಿದೆ. ಇದು ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ತೋರಿಸುತ್ತದೆ ಎಂದು ಹೇಳಿದರು.

ದೇಶದಲ್ಲಿ ಧರ್ಮ ಪ್ರತಿಯೊಬ್ಬರ ವೈಯಕ್ತಿಕ ವಿಚಾರವಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕಿದೆ. ಯಾರೊಬ್ಬರು ತಮ್ಮ ಧರ್ಮದ ಬಗ್ಗೆ ಹೆಮ್ಮೆ ಪಡಬಹುದು ಮತ್ತು ಆಚರಣೆ ಮಾಡಬಹುದು. ಆದರೆ, ಇತರರ ಧಾರ್ಮಿಕ ನಂಬಿಕೆಗಳನ್ನು ಅವಹೇಳನ ಮಾಡುವ ಹಕ್ಕು ಯಾರಿಗೂ ಇಲ್ಲ. ಕೆಲವು ಘಟನೆಗಳು ದೇಶದ ಬಹುತ್ವ ಮತ್ತು ಒಳಗೊಳ್ಳುವಿಕೆಯ ಮೌಲ್ಯಗಳ ಬದ್ಧತೆಯನ್ನು ದುರ್ಬಲಗೊಳಿಸಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದರು.

ನಾವು ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದು ಅವರು ಹೇಳಿದರು ಮತ್ತು ಪ್ರತಿಯೊಬ್ಬರೂ ತಮ್ಮ ದೇಶ, ಭಾಷೆ ಮತ್ತು ಧರ್ಮದ ಬಗ್ಗೆ ಹೆಮ್ಮೆ ಪಡಬೇಕು.  "ಪಾಶ್ಚಿಮಾತ್ಯ ಮಾಧ್ಯಮಗಳು ಭಾರತದ ಸಾಧನೆಗಳನ್ನು ನಿರ್ಲಕ್ಷಿಸುವಾಗ ಅದರ ಮೇಲೆ ನಕಾರಾತ್ಮಕ ಕಥೆಗಳನ್ನು ಹೇಳುವ ಅಭ್ಯಾಸವನ್ನು ಹೊಂದಿವೆ" ಎಂದು ಅವರು ಹೇಳಿದರು, ದೇಶದಲ್ಲಿ ಬಡತನ, ಲಿಂಗ ಅಸಮಾನತೆ ಮತ್ತು ಸಾಮಾಜಿಕ ಅಸಮಾನತೆಯಂತಹ ಹಲವಾರು ಸಮಸ್ಯೆಗಳಿವೆ ಎಂದು ವೆಂಕಯ್ಯನಾಯ್ಡು ಒಪ್ಪಿಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com