ಗಣ್ಯರಿಗೆ ಕೊಲ್ಲುವ ಬೆದರಿಕೆ ಸಂದೇಶ: ಪೋಲೀಸರಿಂದ ತೀವ್ರ ತನಿಖೆ

ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಶಾಸಕರಾದ, ಗೂಳಿಹಟ್ಟಿ ಡಿ.ಶೇಖರ್ ಹಾಗೂ ಎಂ.ಚಂದ್ರಪ್ಪ ಅವರಿಗೆ ಬಂದಿರುವ ಬೆದರಿಕೆ ಕರೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ..
ಇಮ್ಮಡಿ ಸಿದ್ದೇಶ್ವರ ಸ್ವಾಮೀಜಿ
ಇಮ್ಮಡಿ ಸಿದ್ದೇಶ್ವರ ಸ್ವಾಮೀಜಿ
Updated on

ಚಿತ್ರದುರ್ಗ: ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಶಾಸಕರಾದ, ಗೂಳಿಹಟ್ಟಿ ಡಿ.ಶೇಖರ್ ಹಾಗೂ ಎಂ.ಚಂದ್ರಪ್ಪ ಅವರಿಗೆ ಬಂದಿರುವ ಬೆದರಿಕೆ ಕರೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಚಿತ್ರದುರ್ಗ ಎಸ್ ಪಿ ಕೆ. ಪರಶುರಾಮ್ ಹೇಳಿದ್ದಾರೆ.

ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಕರ್ನಾಟಕ ರಾಜ್ಯ ಪೊಲೀಸ್‌ (ಕೆಎಸ್‌ಪಿ) ಆ್ಯಪ್‌ ಮೂಲಕ ಚಿತ್ರದುರ್ಗ ಪೊಲೀಸರಿಗೆ ಸಂದೇಶ ಬಂದಿದೆ. ಭೋವಿ ಸಮುದಾಯಕ್ಕೆ ಸೇರಿದ ಹಲವು ಮುಖಂಡರು ಹಾಗೂ ಅವರ ಕುಟುಂಬ ಅಪಾಯದಲ್ಲಿದೆ ಎಂದು ಸಂದೇಶದಲ್ಲಿ ಎಚ್ಚರಿಕೆ ನೀಡಲಾಗಿದೆ.

ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರಿಗೆ ಭದ್ರತೆ ನೀಡುವಂತೆ ಕೋರಿ ಭೋವಿ ಗುರುಪೀಠ, ಪೊಲೀಸರನ್ನು ಕೋರಿಕೊಂಡಿದೆ. ಮಠದ ಆಸ್ತಿ ಹಾಗೂ ಸ್ವಾಮೀಜಿಗೆ ದುಷ್ಕರ್ಮಿಗಳಿಂದ ಅಪಾಯ ಎದುರಾಗುವ ಸಾಧ್ಯತೆ ಇದೆ. ಹೀಗಾಗಿ ಭದ್ರತೆ ನೀಡುವಂತೆ ಮನವಿ ಮಾಡಲಾಗಿದೆ. ಘಟನೆ ಕುರಿತು ಹೊಳಲ್ಕೆರೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com