ಅಂತರ್ ರಾಜ್ಯ ಸಮಸ್ಯೆಗಳ ಇತ್ಯರ್ಥಕ್ಕೆ ಪಿಆರ್'ಒ ಕೆಲಸ ಮಾಡುತ್ತೇನೆ: ಲೆಹರ್ ಸಿಂಗ್

ಅಂತರರಾಜ್ಯ ನದಿ ನೀರು ಹಂಚಿಕೆ ಸೇರಿದಂತೆ ಅಂತಾರಾಜ್ಯ ಸಮಸ್ಯೆಗಳಿಗೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಲು ನೆರೆಯ ರಾಜ್ಯಗಳ ರಾಜ್ಯಸಭಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸುವುದಾಗಿ ನೂತನವಾಗಿ ಆಯ್ಕೆಯಾಗಿರುವ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಸಿರೋಯಾ ಅವರು ಭಾನುವಾರ ಹೇಳಿದ್ದಾರೆ.
ಲೆಹರ್ ಸಿಂಗ್
ಲೆಹರ್ ಸಿಂಗ್
Updated on

ಬೆಂಗಳೂರು: ಅಂತರರಾಜ್ಯ ನದಿ ನೀರು ಹಂಚಿಕೆ ಸೇರಿದಂತೆ ಅಂತಾರಾಜ್ಯ ಸಮಸ್ಯೆಗಳಿಗೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಲು ನೆರೆಯ ರಾಜ್ಯಗಳ ರಾಜ್ಯಸಭಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸುವುದಾಗಿ ನೂತನವಾಗಿ ಆಯ್ಕೆಯಾಗಿರುವ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಸಿರೋಯಾ ಅವರು ಭಾನುವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನಾನು ರಾಜ್ಯಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆಗಳಿಗೆ ಸಾರ್ವಜನಿಕ ಸಂಪರ್ಕ ಅಧಿಕಾರಿ (ಪಿಆರ್'ಒ) ನಂತೆ ಇರುತ್ತೇನೆ ಮತ್ತು ಅಂತರ-ರಾಜ್ಯ ಸಮಸ್ಯೆಗಳ ಕುರಿತು ವಿವಿಧ ಪಕ್ಷಗಳು ಮತ್ತು ರಾಜ್ಯಗಳ ಸದಸ್ಯರೊಂದಿಗೆ ಮಾತುಕತೆ ನಡೆಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು.

ಮೇಕೆದಾಟು ಸಮತೋಲನ ಜಲಾಶಯದಂತಹ ಯೋಜನೆಗಳಲ್ಲಿ ರಾಜಕೀಯ ಮಾಡಬಾರದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಮಸ್ಯೆ ಬಗೆಹರಿಸಲು ಪ್ರಯತ್ನಿಸಬೇಕು. "ನಾನು ಅಂತಹ ಸಮಸ್ಯೆಗಳನ್ನು ಪರಿಹರಿಸಲು ಬಯಸುತ್ತೇನೆ ಮತ್ತು ಆ ರಾಜ್ಯಗಳ ಸದಸ್ಯರ ಮನಸ್ಸು ಗೆಲ್ಲಲು ಪ್ರಯತ್ನಿಸುತ್ತೇನೆ. ನಾವು ಎಲ್ಲರೊಂದಿಗೂ ಮಾತುಕತೆ ನಡೆಸಬೇಕು ಮತ್ತು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸಬೇಕು ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com