ವಿಜಯಪುರ: ಮೂವರು ಮಕ್ಕಳನ್ನು ಕೃಷಿ ಹೊಂಡಕ್ಕೆ ತಳ್ಳಿ ತಾಯಿ ತಾನೂ ಆತ್ಮಹತ್ಯೆಗೆ ಶರಣು!

ಜಿಲ್ಲೆಯ ತಿಕೋಟಾ ತಾಲೂಕಿನ ತೊರವಿ ತಾಂಡಾದ ತೋಟವೊಂದರಲ್ಲಿ ಕೃಷಿ ಹೊಂಡಕ್ಕೆ ತನ್ನ ಮೂರು ಮಕ್ಕಳನ್ನು ತಳ್ಳಿ ನಂತರ ತಾನೂ ಹಾರಿ ತಾಯಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ವಿಜಯಪುರ: ಜಿಲ್ಲೆಯ ತಿಕೋಟಾ ತಾಲೂಕಿನ ತೊರವಿ ತಾಂಡಾದ ತೋಟವೊಂದರಲ್ಲಿ ಕೃಷಿ ಹೊಂಡಕ್ಕೆ ತನ್ನ ಮೂರು ಮಕ್ಕಳನ್ನು ತಳ್ಳಿ ನಂತರ ತಾನೂ ಹಾರಿ ತಾಯಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. 

27 ವರ್ಷದ ಅನಿತಾ ಪಿಂಟು ಜಾಧವ್, ತನ್ನ ಮಕ್ಕಳಾದ 6 ವರ್ಷದ ಪ್ರವೀಣ, 4 ವರ್ಷದ ಸುದೀಪ ಮತ್ತು 2 ವರ್ಷದ ಮಮದಿಕಾಳನ್ನು ಕೃಷಿ ಹೊಂಡಕ್ಕೆ ಎಸೆದು ನಂತರ ಅನಿತಾ ತಾನೂ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ನಾಲ್ಕು ಜನರ ಮೃತದೇಹವನ್ನು ಹೊರತೆಗೆದ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com