ತಾಯಿ, ಶಿಶುಗಳ ಸಾವು ಪ್ರಕರಣ: ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿ ಹೊರಡಿಸಿದ ಆರೋಗ್ಯ ಇಲಾಖೆ

ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಮತ್ತು ನವಜಾತ ಶಿಶುಗಳ ಸಾವಿನ ಪ್ರಕರಣದ ನಂತರ ಎಚ್ಚೆತ್ತುಕೊಂಡಿರುವ ಆರೋಗ್ಯ ಇಲಾಖೆ, ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಆರೋಗ್ಯ ಸಚಿವ ಸುಧಾಕರ್
ಆರೋಗ್ಯ ಸಚಿವ ಸುಧಾಕರ್
Updated on

ಬೆಂಗಳೂರು: ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಮತ್ತು ನವಜಾತ ಶಿಶುಗಳ ಸಾವಿನ ಪ್ರಕರಣದ ನಂತರ ಎಚ್ಚೆತ್ತುಕೊಂಡಿರುವ ಆರೋಗ್ಯ ಇಲಾಖೆ, ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಮಾರ್ಗಸೂಚಿಯಂತೆ ಇನ್ನು ಮುಂದೆ ತುರ್ತು ಆರೋಗ್ಯ ಸೇವೆಯನ್ನು ನೀಡುವ ಸಂದರ್ಭದಲ್ಲಿ ತಾಯಿ ಕಾರ್ಡ್, ಆಧಾರ್ ಕಾರ್ಡ್, ಪಡಿತರ ಕಾರ್ಡ್ ಇತ್ಯಾದಿ ಯಾವುದೇ ದಾಖಲೆಗಳು ಸಲ್ಲಿಸುವ ಅವಶ್ಯವಿರುವುದಿಲ್ಲ. ಯಾವುದೇ ದಾಖಲೆಗಳು ಇಲ್ಲದಿದ್ದರೂ ಚಿಕಿತ್ಸೆ ನೀಡಬೇಕೆಂದು ತಿಳಿಸಿದೆ.

ತುರ್ತು ಪರಿಸ್ಥಿತಿಯಲ್ಲಿ ಆರೋಗ್ಯ ಸೇವೆಯನ್ನು ನೀಡುವುದು ಆರೋಗ್ಯ ಕೇಂದ್ರಗಳ ಆದ್ಯ ಕರ್ತವ್ಯವಾಗಿದ್ದು, ಆರೋಗ್ಯ ಸೇವೆಯನ್ನು ನೀಡುವಾಗ ರೋಗಿಯ ರಾಷ್ಟ್ರೀಯತೆ, ಜಾತಿ, ವರ್ಗ, ಆರ್ಥಿಕ ಸ್ಥಿತಿಯನ್ನು ಅವಲಂಭಿಸಬಾರದು ಎಂದು ಹೇಳಿದೆ.

ತುರ್ತು ಪರಿಸ್ಥಿತಿಯಲ್ಲಿ ರೋಗಿಯ ನೋವು ಸಂಕಟವನ್ನು ನಿವಾರಿಸುವುದು ವೈದ್ಯರ, ಶುಶ್ರೂಷಕರ ಮತ್ತು ಇತರೆ ಸಿಬ್ಬಂದಿ ವರ್ಗದವರ ಆದ್ಯ ಕರ್ತವ್ಯವಾಗಿದೆ. ಸಾರ್ವಜನಿಕ ಆರೋಗ್ಯ ಸಂಸ್ಥೆಗಳು ತುರ್ತು ಪರಿಸ್ಥಿತಿಯಲ್ಲಿ ರೋಗಿಯು ಯಾವುದೇ ರೀತಿಯ ದಾಖಲೆಗಳನ್ನು ಒದಗಿಸಲು ಒತ್ತಾಯಿಸಬಾರದು. ಇಂತಹ ಘಟನೆಯು ಮರುಕಳಿಸಿದರೆ ಅಂತಹ ಅಧಿಕಾರಿ, ನೌಕರರನ್ನು ಸೇವೆಯಿಂದ ವಜಾಗೊಳಿಸಲಾಗುವುದು, ಅಲ್ಲದೆ ಕ್ರಿಮಿನಲ್ ಮೊಕದ್ದಮೆಯನ್ನು ಹೂಡಲಾಗುತ್ತದೆ ಎಂದು ಎಚ್ಚರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com