ರೇಣುಕಾಚಾರ್ಯ ಸಹೋದರನ ಪುತ್ರ ನಿಗೂಢ ಸಾವು ಪ್ರಕರಣ: ಎಲ್ಲಾ ಆಯಾಮಗಳಿಂದ ತನಿಖೆ- ಆರಗ ಜ್ಞಾನೇಂದ್ರ

ರೇಣುಕಾಚಾರ್ಯರ ಸಹೋದರನ ಪುತ್ರನ ನಿಗೂಢ ಸಾವು ಪ್ರಕರಣ ಸಂಬಂಧ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುತ್ತಿದ್ದೇವೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗುರುವಾರ ಹೇಳಿದ್ದಾರೆ.
ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ

ಬೆಂಗಳೂರು: ರೇಣುಕಾಚಾರ್ಯರ ಸಹೋದರನ ಪುತ್ರನ ನಿಗೂಢ ಸಾವು ಪ್ರಕರಣ ಸಂಬಂಧ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುತ್ತಿದ್ದೇವೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗುರುವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರೇಣುಕಾಚಾರ್ಯರ ಸಹೋದರನ ಮಗನ ಕಾರು ಕಾಲುವೆಯಲ್ಲಿ ಸಿಕ್ಕಿದೆ. ಕಾರಿನಲ್ಲಿ ಶವ ಪತ್ತೆಯಾಗಿದೆ. ಉಳಿದದ್ದು ತನಿಖೆಯಿಂದ ಹೊರಬರಬೇಕಿದೆ. ಪ್ರಕರಣ ಸಂಬಂಧ ಎಲ್ಲಾ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ರೇಣುಕಾಚಾರ್ಯ ನನಗೂ ದಿನದಲ್ಲಿ 2-3 ಬಾರಿ ಕರೆ ಮಾಡುತ್ತಿದ್ದರು. ನಾನು ಅವರಿಗೆ ಕರೆ ಮಾಡಿ ಮಾತನಾಡುತ್ತಿದ್ದೆ. ಪ್ರಕರಣ ಸಂಬಂಧ ರೇಣುಕಾಚಾರ್ಯ ಅವರು ಶಂಕೆಗಳನ್ನು ವ್ಯಕ್ತಪಡಿಸಿದ್ದಾರೆ. ಎಲ್ಲಾ ಆಯಾಮದಲ್ಲೂ ಚರ್ಚೆ ನಡೆಸಲಾಗುತ್ತದೆ. ಶೀಘ್ರದಲ್ಲಿಯೇ ಹೊನ್ನಾಳಿಗೆ ಭೇಟಿ ನೀಡಿ ರೇಣುಕಾಚಾರ್ಯ ಅವರನ್ನು ಭೇಟಿ ಮಾಡುತ್ತೇನೆಂದು ತಿಳಿಸಿದ್ದಾರೆ.

ಇದೇ ವೇಳೆ ಮಂಡ್ಯ ಘಟನೆ ಕುರಿತು ಮಾತನಾಡಿ, ಮಂಡ್ಯದಲ್ಲಿ ಆಸ್ಪತ್ರೆಗೆ ಹೊರಟವರನ್ನು ಅಡ್ಡ ಹಾಕಿ ಹೆಲ್ಮೆಟ್ ಹಾಕದಕ್ಕೆ ಪೇದೆ ದಂಡ ಹಾಕಿದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಇದು ಖಂಡನೀಯ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com