2ಎ ಮೀಸಲಾತಿಗೆ ಆಗ್ರಹ: 'ಚಲೋ ಬೆಂಗಳೂರು'ಗೆ ಸಿದ್ಧರಾಗುವಂತೆ ಜಯ ಮೃತ್ಯುಂಜಯ ಶ್ರೀಗಳು ಕರೆ

ಪಂಚಮಸಾಲಿ ಸಮಾಜಕ್ಕೆ 2ಎ ಪ್ರವರ್ಗದಡಿ ಮೀಸಲಾತಿ ನೀಡುವಂತೆ ಆಗ್ರಹಿಸಿ ಡಿ.12ರಂದು ನಡೆಯಲಿರುವ ‘ಚಲೋ ಬೆಂಗಳೂರು’ ರ್ಯಾಲಿಯಲ್ಲಿ ಎಲ್ಲರೂ ಪೂರ್ಣ ಪ್ರಮಾಣದಲ್ಲಿ ಭಾಗವಹಿಸಲು ಸಜ್ಜಾಗಬೇಕಾದ ಸಮಯ ಬಂದಿದೆ ಎಂದು ಕೂಡಲಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮಿ ಹೇಳಿದ್ದಾರೆ.
ಬೃಹತ್ ಸಮಾವೇಶದಲ್ಲಿ ಮಾತನಾಡುತ್ತಿರುವ ಲಕ್ಷ್ಮೀ ಹೆಬ್ಬಾಳ್ಕರ್.
ಬೃಹತ್ ಸಮಾವೇಶದಲ್ಲಿ ಮಾತನಾಡುತ್ತಿರುವ ಲಕ್ಷ್ಮೀ ಹೆಬ್ಬಾಳ್ಕರ್.
Updated on

ಗೋಕಾಕ: ಪಂಚಮಸಾಲಿ ಸಮಾಜಕ್ಕೆ 2ಎ ಪ್ರವರ್ಗದಡಿ ಮೀಸಲಾತಿ ನೀಡುವಂತೆ ಆಗ್ರಹಿಸಿ ಡಿ.12ರಂದು ನಡೆಯಲಿರುವ ‘ಚಲೋ ಬೆಂಗಳೂರು’ ರ್ಯಾಲಿಯಲ್ಲಿ ಎಲ್ಲರೂ ಪೂರ್ಣ ಪ್ರಮಾಣದಲ್ಲಿ ಭಾಗವಹಿಸಲು ಸಜ್ಜಾಗಬೇಕಾದ ಸಮಯ ಬಂದಿದೆ ಎಂದು ಕೂಡಲಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮಿ ಹೇಳಿದ್ದಾರೆ.

ಭಾನುವಾರ ಸಂಜೆ ಗೋಕಾಕ ಪೇಟೆಯಲ್ಲಿ 10 ಸಾವಿರಕ್ಕೂ ಹೆಚ್ಚು ಜನ ಸೇರಿದ್ದ ಬೃಹತ್ ಸಮಾವೇಶದಲ್ಲಿ ಶ್ರೀಗಳು ಮಾತನಾಡಿದರು. ''ಸಮುದಾಯದ ಬೇಡಿಕೆಯ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ಸರಕಾರ ಈ ಹಿಂದೆ ಭರವಸೆ ನೀಡಿತ್ತು, ಅದು ಈಡೇರಲಿಲ್ಲ. ಈಗ ಬೆಂಗಳೂರಿನಲ್ಲಿ 25 ಲಕ್ಷಕ್ಕೂ ಹೆಚ್ಚು ಜನ ನಮ್ಮ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಇತ್ತೀಚೆಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರ ವಾಹನದ ಮೇಲೆ ನಡೆದ ದಾಳಿಯನ್ನು ಖಂಡಿಸಿದರು.

ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ನಾವು ಯಾರನ್ನೂ ವಿರೋಧಿಸಲು ಬಂದಿಲ್ಲ. 2ಎ ಪ್ರವರ್ಗದಡಿ ಮೀಸಲಾತಿ ಕಲ್ಪಿಸುವ ಮೂಲಕ ನಮ್ಮ ಬೇಡಿಕೆಯನ್ನು ಈಡೇರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡುತ್ತಿದ್ದೇವೆ. ಹಾಗೆ ಮಾಡಿದರೆ ಪಂಚಮಸಾಲಿಗಳ ಪ್ರತಿಯೊಂದು ಮನೆಯಲ್ಲೂ ಬೊಮ್ಮಾಯಿಯವರ ಫೋಟೋ ಇರಲಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com