ಗಂಭೀರ ಸ್ಥಿತಿಯಲ್ಲಿ ಬಿಜೆಪಿ ಮುಖಂಡ ಧರ್ಮಣ್ಣ ದೊಡ್ಡಮನಿ, ಬೆಂಗಳೂರಿಗೆ ಏರ್ ಲಿಫ್ಟ್ 

ಅಪಘಾತದಲ್ಲಿ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿದ್ದ ಬಿಜೆಪಿ ಮುಖಂಡ ಹಾಗೂ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಅಧ್ಯಕ್ಷ ಧರ್ಮಣ್ಣ ದೊಡ್ಡಮನಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶುಕ್ರವಾರ ಕಲಬುರಗಿಯಿಂದ ಬೆಂಗಳೂರಿಗೆ ವಿಶೇಷ್ ಏರ್ ಅಂಬುಲೆನ್ಸ್ ಮೂಲಕ ಏರ್ ಲಿಫ್ಟ್ ಮಾಡಲಾಯಿತು.
ಧರ್ಮಣ್ಣ ದೊಡ್ಡಮನಿ
ಧರ್ಮಣ್ಣ ದೊಡ್ಡಮನಿ
Updated on

ಕಲಬುರಗಿ:  ಅಪಘಾತದಲ್ಲಿ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿದ್ದ ಬಿಜೆಪಿ ಮುಖಂಡ ಹಾಗೂ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಅಧ್ಯಕ್ಷ ಧರ್ಮಣ್ಣ ದೊಡ್ಡಮನಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶುಕ್ರವಾರ ಕಲಬುರಗಿಯಿಂದ ಬೆಂಗಳೂರಿಗೆ ವಿಶೇಷ್ ಏರ್ ಅಂಬುಲೆನ್ಸ್ ಮೂಲಕ ಏರ್ ಲಿಫ್ಟ್ ಮಾಡಲಾಯಿತು.

ನಗರದ ಖಾಸಗಿ ಆಸ್ಪತ್ರೆಯಿಂದ ಜಿರೋ ಟ್ರಾಫಿಕ್ ವ್ಯವಸ್ಥೆ ಮಾಡಿ, ವಿಮಾನ ನಿಲ್ದಾಣಕ್ಕೆ ಕರೆದೊಯ್ಯಲಾಯಿತು. ಅಲ್ಲಿಂದ ಬೆಂಗಳೂರಿನ ಎಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಇಳಿದು, ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದಕ್ಕೂ ಮುನ್ನ  ಧರ್ಮಣ್ಣ ದೊಡ್ಡಮನಿ ಚಿಕಿತ್ಸೆ ಪಡೆಯುತ್ತಿದ್ದ ಕಲಬುರಗಿಯ ಖಾಸಗಿ‌ ಆಸ್ಪತ್ರೆಗೆ ಸಂಸದ ಸಂಸದ ಉಮೇಶ್ ಜಿ ಜಾಧವ್ ಭೇಟಿ ನೀಡಿದ್ದು, ಆರೋಗ್ಯದ ವಿವರಣೆ ಪಡೆದಿದ್ದಾಗಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com