ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ: ಚಿಲುಮೆ ಮುಖ್ಯಸ್ಥ ರವಿಕುಮಾರ್​ ಪತ್ನಿ, ಕೃಷ್ಣೇಗೌಡ ಪತ್ನಿ ಪೊಲೀಸರ ವಶಕ್ಕೆ

ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿ ‘ಚಿಲುಮೆ’ ಮುಖ್ಯಸ್ಥ ರವಿಕುಮಾರ್​ ಪತ್ನಿ, ಕೃಷ್ಣೇಗೌಡ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿ ‘ಚಿಲುಮೆ’ ಮುಖ್ಯಸ್ಥ ರವಿಕುಮಾರ್​ ಪತ್ನಿ, ಕೃಷ್ಣೇಗೌಡ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

ಚಿಲುಮೆ ಸಂಸ್ಥೆ ನಿರ್ದೇಶಕಿ ಆಗಿರುವ ರವಿಕುಮಾರ್ ಪತ್ನಿ ಐಶ್ವರ್ಯ ಹಾಗೂ ಟಿ.ಬೇಗೂರು ತೋಟದ ಮನೆಗೆ ದಾಖಲಾತಿ ಸಾಗಿಸಿದ್ದ ಕೃಷ್ಣೇಗೌಡ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಾಹಿತಿ ಆಧರಿಸಿ ನಿನ್ನೆ ರಾತ್ರಿ ಕಾರ್ಯಾಚರಣೆ ನಡೆಸಿದ್ದ ಹಲಸೂರು ಗೇಟ್​ ಪೊಲೀಸರು ನಿನ್ನೆ ನಾಲ್ವರನ್ನು ವಶಕ್ಕೆ ಪಡೆದಿದ್ದರು. ಇಂದು ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಆರೋಪಿಗಳನ್ನ ಹಾಜರುಪಡಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com