ಹಿರಿಯೂರು: ಬೈಕ್ ತಪ್ಪಿಸಲು ಹೋಗಿ ಸಿಎಂ ಎಸ್ಕಾರ್ಟ್ ವಾಹನ ಪಲ್ಟಿ; ನಾಲ್ವರು ಪೊಲೀಸ್, ಮಹಿಳೆ, ಮಗುವಿಗೆ ಗಂಭೀರ ಗಾಯ

ಏಕಾ ಏಕಿ ಎದುರಾದ ಬೈಕ್ ನ್ನು ತಪ್ಪಿಸಲು ಹೋಗಿ ಸಿಎಂ ಬೆಂಗಾವಲು ಪಡೆ ವಾಹನ ಪಲ್ಟಿಯಾಗಿರುವ ಘಟನೆ ಚಿತ್ರದುರ್ಗದ ಹಿರಿಯೂರಿನ ರಾಣಿಕೆರೆಯಲ್ಲಿ ನಡೆದಿದೆ.
ಸಿಸಿಟಿವಿಯಲ್ಲಿ ಸೆರೆಯಾದ ಕಾರು ಪಲ್ಟಿಯಾಗುತ್ತಿರುವ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾದ ಕಾರು ಪಲ್ಟಿಯಾಗುತ್ತಿರುವ ದೃಶ್ಯ
Updated on

ಹಿರಿಯೂರು: ಏಕಾ ಏಕಿ ಎದುರಾದ ಬೈಕ್ ನ್ನು ತಪ್ಪಿಸಲು ಹೋಗಿ ಸಿಎಂ ಬೆಂಗಾವಲು ಪಡೆ ವಾಹನ ಪಲ್ಟಿಯಾಗಿರುವ ಘಟನೆ ಚಿತ್ರದುರ್ಗದ ಹಿರಿಯೂರಿನಲ್ಲಿ ನಡೆದಿದೆ.
 
ಕಾರು ಪಲ್ಟಿ ಹೊಡೆದ ರಭಸಕ್ಕೆ ಓರ್ವ ಮಹಿಳೆ ಹಾಗೂ ಆಕೆಯ ಮಗುವಿಗೆ ಗಂಭೀರ ಗಾಯಗಳಾಗಿದ್ದರೆ, ಹಲವು ಮಂದಿ ಪೊಲೀಸರಿಗೂ ಗಾಯಗಳಾಗಿವೆ. 

ಸರಣಿ ಅಪಘಾತ ಇದಾಗಿದ್ದು, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿಎಂ ಬಿಜೆಪಿಯ ಜನಸಂಕಲ್ಪ ಯಾತ್ರೆಗಾಗಿ ಹಿರಿಯೂರಿಗೆ ಆಗಮಿಸಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಪಲ್ಟಿಯಾದ ಕಾರು ನಿಯಂತ್ರಣ ಕಳೆದುಕೊಂಡು ಪಾದಾಚಾರಿಗಳ ಮೇಲೆ ಹರಿದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com