ಗದಗ: ಕಾರು ತೊಳೆಯಲೆಂದು ಮಲಪ್ರಭಾ ಕಾಲುವೆಗೆ ಹೋಗಿದ್ದ ಇಬ್ಬರು ಯುವಕರು ನೀರು ಪಾಲು

ಪಟ್ಟಣದ ಯುವಕರಿಬ್ಬರು ಮಂಗಳವಾರ ಸವದತ್ತಿ ಮಾರ್ಗದಲ್ಲಿನ ಮಲಪ್ರಭಾ ಮುಖ್ಯ ಕಾಲುವೆಯಲ್ಲಿ (ನರಗುಂದ ಬ್ಲಾಕ್) ಕಾರು ತೊಳೆಯಲು ಹೋದ ಯುವಕರು ಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿದ್ದು, ಬುಧವಾರವಾದರೂ ಪತ್ತೆಯಾಗಿಲ್ಲ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನರಗುಂದ: ಪಟ್ಟಣದ ಯುವಕರಿಬ್ಬರು ಮಂಗಳವಾರ ಸವದತ್ತಿ ಮಾರ್ಗದಲ್ಲಿನ ಮಲಪ್ರಭಾ ಮುಖ್ಯ ಕಾಲುವೆಯಲ್ಲಿ (ನರಗುಂದ ಬ್ಲಾಕ್) ಕಾರು ತೊಳೆಯಲು ಹೋದ ಯುವಕರು ಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿದ್ದು, ಬುಧವಾರವಾದರೂ ಪತ್ತೆಯಾಗಿಲ್ಲ.

ಕಾಲುವೆ ಪಾಲಾದ ಯುವಕರು ಪಟ್ಟಣದ ಸಿದ್ದನಬಾವಿ ಓಣಿಯ ಅರುಣ ಚನ್ನಪ್ಪ ಪಡೆಸೂರ (27), ಹಾಲಬಾವಿ ಕೆರೆ ಓಣಿಯ ಹನಮಂತ ನರಸಪ್ಪ ಮಜ್ಜಗಿ (20) ಎಂದು ಗುರುತಿಸಲಾಗಿದೆ.

ಮಂಗಳವಾರ ಸಾಯಂಕಾಲ ಕಾರು ತೊಳೆಯಲು ಕಾಲುವೆಗೆ ಇಳಿದಿದ್ದರು. ನೀರು ರಭಸದಿಂದ ಹರಿಯುತ್ತಿದ್ದರಿಂದ ಕೊಚ್ಚಿಕೊಂಡು ಹೋದರು ಎಂದು ತಿಳಿದು ಬಂದಿದೆ. ತಕ್ಷಣ ಕಾಲುವೆ ಅಧಿಕಾರಿಗಳಿಗೆ ಸುದ್ದಿ ಮುಟ್ಟಿಸಿದರೂ ನೀರು ಕಡಿಮೆ ಮಾಡಲಿಲ್ಲ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸಿದರು.

ಕಾರು ತೊಳೆಯಲು ನೀರು ತರಲೆಂದು ಇಳಿದ ವೇಳೆ ಒಬ್ಬಾತ ಜಾರಿ ಬಿದ್ದು, ಇನ್ನೊಬ್ಬ ಆತನ ರಕ್ಷಣೆಗೆಂದು ಹೋಗಿ ನೀರು ಪಾಲಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಯುವಕರ ಪತ್ತೆಗಾಗಿ ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com