ಹೂಡಿಕೆದಾರರ ಓಲೈಸಲು ಬೆಂಗಳೂರಿಗೆ ಬಂದ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್!

ಕರ್ನಾಟಕವು ಜಾಗತಿಕ ಹೂಡಿಕೆದಾರರ ಸಭೆ ಮತ್ತು ಬೆಂಗಳೂರು ಟೆಕ್ ಶೃಂಗಸಭೆಯನ್ನು ಆಯೋಜಿಸಿದ ಬೆನ್ನಲ್ಲೇ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಜವಳಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೂಡಿಕೆದಾರರನ್ನು ಸೆಳೆಯಲು ಬೆಂಗಳೂರಿಗೆ ಆಗಮಿಸಿದ್ದಾರೆ.
ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್
ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್

ಬೆಂಗಳೂರು: ಕರ್ನಾಟಕವು ಜಾಗತಿಕ ಹೂಡಿಕೆದಾರರ ಸಭೆ ಮತ್ತು ಬೆಂಗಳೂರು ಟೆಕ್ ಶೃಂಗಸಭೆಯನ್ನು ಆಯೋಜಿಸಿದ ಬೆನ್ನಲ್ಲೇ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಜವಳಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೂಡಿಕೆದಾರರನ್ನು ಸೆಳೆಯಲು ಬೆಂಗಳೂರಿಗೆ ಆಗಮಿಸಿದ್ದಾರೆ.

ಹೂಡಿಕೆದಾರರೊಂದಿಗೆ ಸುದೀರ್ಘವಾಗಿ ಮಾತನಾಡಿದ ಚೌಹಾಣ್ ಅವರು, ರಾಜ್ಯದ ಸಾಮರ್ಥ್ಯವನ್ನು ಉದ್ಯಮ ಸಂಸ್ಥೆಗಳಿಗೆ ಪ್ರದರ್ಶಿಸಿದರು.

“ನನ್ನ ಪ್ರತಿ ಸೋಮವಾರ ಹೂಡಿಕೆದಾರರಿಗೆ ಮೀಸಲಾಗಿದೆ. ನಾನು ಮತ್ತು ನನ್ನ ತಂಡವು ಯಾವಾಗಲೂ ನಿಮಗೆ ಲಭ್ಯವಿರುತ್ತೇವೆ ಎಂದು ಹೂಡಿಕೆದಾರರಿಗೆ ತಿಳಿಸಿದರು.

ಇದೇ ವೇಳೆ 2023 ರ ಜನವರಿಯಲ್ಲಿ ಮಧ್ಯಪ್ರದೇಶದ ಇಂದೋರ್‌ನಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ  ಆಯೋಜಿಸುವುದಾಗಿ ಘೋಷಿಸಿದರು.

ಬಳಿಕ ಬೆಂಗಳೂರಿನಲ್ಲಿ ಎಸ್‌ಸಿಎಂ ಟೆಕ್ಸ್‌ಟೈಲ್ಸ್ (ಚೆನ್ನೈ ಸಿಲ್ಕ್ಸ್) ವ್ಯವಸ್ಥಾಪಕ ನಿರ್ದೇಶಕ ಪಿಪಿಕೆ ಪರಮಶಿವಂ ಅವರನ್ನು ಭೇಟಿ ಮಾಡಿದ ಚೌಹಾಣ್ ಅವರು, ಮಧ್ಯಪ್ರದೇಶದಲ್ಲಿ ಸ್ಥಾವರವನ್ನು ಸ್ಥಾಪಿಸುವ ಕುರಿತು ಪ್ರಸ್ತಾಪಿಸಿದರು. ಇದರಿಂದ ಸುಮಾರು 2,000 ಜನರಿಗೆ ಉದ್ಯೋಗ ಸಿಗಲಿದೆ ಎಂದು ಹೇಳಿದರು.

ಟ್ರೈಡೆಂಟ್, ವರ್ಧಮಾನ್, ಎಸಿಎಲ್ ಮತ್ತು ಗೋಕುಲದಾಸ್ ಸೇರಿದಂತೆ ರಾಜ್ಯದಲ್ಲಿ ಪ್ರಸ್ತುತ ಇರುವ ದೊಡ್ಡ ಕೈಗಾರಿಕೆಗಳನ್ನು ಉಲ್ಲೇಖಿಸಿ ಮಾತನಾಡಿ, ಜವಳಿ ಉದ್ಯಮಕ್ಕೆ ಹೂಡಿಕೆಗಳನ್ನು ಸೆಳೆಯಲು ಒತ್ತು ನೀಡಿದರು.

ಕರ್ನಾಟಕದ ಕೈಗಾರಿಕೆಗಳ ಸ್ಥಾಪನೆ, ಕಾರ್ಯಾಚರಣೆ ಮತ್ತು ನಿರ್ಬಂಧಗಳಲ್ಲಿ ಯಾವುದೇ ಸಮಸ್ಯೆಗಳನ್ನು ಎದುರಿಸುವುದಿಲ್ಲ ಎಂದು ಭರವಸೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com