ರಾಮನಗರ: ಬಾಣಂತಿ ಡಿಸ್ಚಾರ್ಜ್ ಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ವೈದ್ಯರಾದ ಶಶಿಕಲಾ, ಐಶ್ವರ್ಯ ಅಮಾನತು

ಬಾಣಂತಿಯನ್ನು ಡಿಸ್ಚಾರ್ಜ್ ಮಾಡಲು 6000 ಲಂಚ ಕೇಳಿದ್ದ ರಾಮನಗರ ಜಿಲ್ಲೆ ಬಿಡದಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಲ್ಲಿ ಒಬ್ಬರಾಗಿರುವ ಪ್ರಸೂತಿ ತಜ್ಞೆ ಡಾ. ಶಶಿಕಲಾ ಹಾಗೂ ಡಾ. ಐಶ್ವರ್ಯರನ್ನು ಅಮಾನತು ಮಾಡಲಾಗಿದೆ.
ವೈದ್ಯರಾದ ಶಶಿಕಲಾ-ಐಶ್ವರ್ಯ
ವೈದ್ಯರಾದ ಶಶಿಕಲಾ-ಐಶ್ವರ್ಯ
Updated on

ರಾಮನಗರ: ಬಾಣಂತಿಯನ್ನು ಡಿಸ್ಚಾರ್ಜ್ ಮಾಡಲು 6000 ಲಂಚ ಕೇಳಿದ್ದ ರಾಮನಗರ ಜಿಲ್ಲೆ ಬಿಡದಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಲ್ಲಿ ಒಬ್ಬರಾಗಿರುವ ಪ್ರಸೂತಿ ತಜ್ಞೆ ಡಾ. ಶಶಿಕಲಾ ಹಾಗೂ ಡಾ. ಐಶ್ವರ್ಯರನ್ನು ಅಮಾನತು ಮಾಡಲಾಗಿದೆ.

ಬಾಣಂತಿ ರೂಪ ಎಂಬುವರ ಡಿಸ್ಚಾರ್ಚ್ ಮಾಡಲು ವೈದ್ಯರು ಲಂಚಕ್ಕೆ ಬೇಡಿಕೆ ಇಟ್ಟಿದ್ದ ವಿಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರನ್ನು ಅಮಾನತು ಮಾಡಲಾಗಿದೆ. ಇನ್ನು ವಿಡಿಯೋದಲ್ಲಿ ಮತ್ತೋಬ್ಬ ವೈದ್ಯನ ಹೆಸರು ಉಲ್ಲೇಖವಾಗಿರುವುದರಿಂದ ಆ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ರಾಮನಗರ ಡಿಎಚ್ಒ ಕಾಂತರಾಜು ಹೇಳಿದ್ದಾರೆ. 

ಬಿಡದಿಯ ನಿಂಗೇಗೌಡ ದೊಡ್ಡಿಯ ಮಂಜಪ್ಪ ಅವರು ತಮ್ಮ ಪತ್ನಿ ರೂಪ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ರೂಪ ವಾರದ ಹಿಂದೆ ಮಗುವಿಗೆ ಜನ್ಮ ನೀಡಿದ್ದರು. ಹೀಗಾಗಿ ಡಿಸ್ಚಾರ್ಜ್ ಮಾಡುವಂತೆ ವೈದ್ಯರ ಬಳಿ ಕೇಳಿದಾಗ ಶಶಿಕಲಾ ಅವರು 6 ಸಾವಿರ ರೂಪಾಯಿ ಕೊಡುವಂತೆ ಬೇಡಿಕೆ ಇಟ್ಟಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com