ಬೆಂಗಳೂರು: ಪಂಜಾಬ್ ನಲ್ಲಿ ಕರ್ತವ್ಯನಿರತ ಹಾವೇರಿ ಜಿಲ್ಲೆಯ ಯೋಧ ಶಿವರಾಜ್ ಅವರು ಅಪಘಾತದಲ್ಲಿ ನಿಧನರಾಗಿದ್ದು, ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಈ ಸಂಬಂಧ ಇಂದು ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ. ಪಂಜಾಬನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಅಪಘಾತಕ್ಕೊಳಗಾಗಿ ವೀರಮರಣ ಹೊಂದಿದ ಹಾವೇರಿ ಜಿಲ್ಲೆಯ ನಮ್ಮ ಶಿಗ್ಗಾಂವಿ ತಾಲೂಕಿನ ಶೀಲವಂತ ಸೋಮಾಪುರದ ವೀರ ಯೋಧ ಶಿವರಾಜ್ ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದಿದ್ದಾರೆ.
ಶಿವರಾಜ್ ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ಸಿಎಂ ಟ್ವೀಟ್ ಮಾಡಿದ್ದಾರೆ.
Advertisement