ಬೆಂಗಳೂರು: 112 ಪೊಲೀಸ್ ಸಹಾಯವಾಣಿಗೆ ಚಾಲನೆ 

ಯಾವುದೇ ರೀತಿಯ ಅಪರಾಧ ಕೃತ್ಯಗಳು, ಕಾನೂನು ಬಾಹಿರ ಚಟುವಟಿಕೆಗಳು ನಡೆದರೆ ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ಪೊಲೀಸರು ಧಾವಿಸಿ ಕ್ರಮ ಕೈಗೊಳ್ಳುವ 112 ಪೊಲೀಸ್ ಸಹಾಯವಾಣಿಗೆ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಇಂದು ಚಾಲನೆ ನೀಡಿದರು.
112 ಸಹಾಯವಾಣಿ ಕುರಿತ ಜಾಗೃತಿ
112 ಸಹಾಯವಾಣಿ ಕುರಿತ ಜಾಗೃತಿ
Updated on

ಬೆಂಗಳೂರು: ಯಾವುದೇ ರೀತಿಯ ಅಪರಾಧ ಕೃತ್ಯಗಳು, ಕಾನೂನು ಬಾಹಿರ ಚಟುವಟಿಕೆಗಳು ನಡೆದರೆ ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ಪೊಲೀಸರು ಧಾವಿಸಿ ಕ್ರಮ ಕೈಗೊಳ್ಳುವ 112 ಪೊಲೀಸ್ ಸಹಾಯವಾಣಿಗೆ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಇಂದು ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಸಹಾಯವಾಣಿಗೆ ಕರೆ ಮಾಡಿ ಸಮಸ್ಯೆ ವಿವರಿಸಿದರೆ, ನಗರದ ಯಾವುದೇ ಭಾಗಕ್ಕೆ 15 ನಿಮಿಷದಲ್ಲಿ ಸಿಬ್ಬಂದಿ ಭೇಟಿ ನೀಡಿ, ಸಮಸ್ಯೆ ಬಗೆಹರಿಸುತ್ತಾರೆ. ತುರ್ತು ಸಮಯದಲ್ಲಿ 112ಕ್ಕೆ ಕರೆ ಮಾಡಿ ಎಂದು ಮನವಿ ಮಾಡಿದರು.

ಸಹಾಯವಾಣಿ 112 ಜನಪ್ರಿಯವಾಗುವಂತೆ ಮಾಡಲು ಹಲವು ರೀತಿಯ ಪ್ರಚಾರ ಚಟುವಟಿಕೆ ನಡೆಸಲಾಗುವುದು, ನಗರದಲ್ಲಿ ಸಂಚರಿಸುವ ಎಲ್ಲ ಬಿಎಂಟಿಸಿ  ಬಸ್ ಗಳಲ್ಲಿ 112 ಪೊಲೀಸ್ ಸಹಾಯವಾಣಿ ಬಗ್ಗೆ ಸ್ಟೀಕರ್ ಹಾಕಿ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.

ಡಿಜಿ ಐಜಿಪಿ ಪ್ರವೀಣ್ ಸೂದ್ ಮಾತನಾಡಿ, ನಗರ ಕಮಿಷನರ್ ಆಗಿದ್ದಾಗ ಸಹಾಯವಾಣಿ ಕಾರ್ಯಕ್ಷಮತೆ ಹೆಚ್ಚಿಸಲು ಹಲವು ಕ್ರಮ ತೆಗೆದುಕೊಂಡಿದ್ದಾಗಿ ತಿಳಿಸಿದರು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com