ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿಂದು ಸರ್ವಪಕ್ಷ ಸಭೆ: ನ್ಯಾ.ನಾಗಮೋಹನ್ ದಾಸ್ ಆಯೋಗದ ವರದಿ ಕುರಿತು ಚರ್ಚೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಶುಕ್ರವಾರ ಸರ್ವಪಕ್ಷ ಸಭೆ ಕರೆಯಲಾಗಿದೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿಂದು ಸಭೆ ನಡೆಯಲಿದೆ.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ
Updated on

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಶುಕ್ರವಾರ ಸರ್ವಪಕ್ಷ ಸಭೆ ಕರೆಯಲಾಗಿದೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿಂದು ಸಭೆ ನಡೆಯಲಿದೆ. ಕಾಂಗ್ರೆಸ್ ನಿಂದ ಭಾರತ್ ಜೋಡೋ ಯಾತ್ರೆ, ಬಿಜೆಪಿಯಿಂದ ಮುಂದಿನ ವಾರ ಆರಂಭವಾಗಲಿರುವ ರಾಜ್ಯಾದ್ಯಂತ ರ್ಯಾಲಿ, ವಿಧಾನಸಭೆ ಚುನಾವಣೆ ಸನ್ನಿಹಿತ ಗಳಿಗೆಯಲ್ಲಿ ಸರ್ವಪಕ್ಷ ಸಭೆ ಮಹತ್ವ ಪಡೆದಿದೆ.

ಜನಸಂಖ್ಯೆಗೆ ಅನುಗುಣವಾಗಿ ಪರಿಶಿಷ್ಟ ಸಮುದಾಯಗಳ ಮೀಸಲಾತಿ ಹೆಚ್ಚಿಸಬೇಕೆಂಬ ಹೋರಾಟದ ಹಿನ್ನೆಲೆಯಲ್ಲಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿ ಕುರಿತು ಚರ್ಚೆ ನಡೆಯಲಿದೆ. ನಿನ್ನೆ ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ, ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿ ಶಿಫಾರಸುಗಳ ಜಾರಿಗೆ ಸರ್ವಪಕ್ಷ ಸಭೆಯಲ್ಲಿ ಒತ್ತಾಯಿಸಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com