ಎಂ.ಪಿ.‌ ರೇಣುಕಾಚಾರ್ಯ ಆಪ್ತ ಸಹಾಯಕನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.‌ ರೇಣುಕಾಚಾರ್ಯ ಅವರ ಆಪ್ತ ಸಹಾಯಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಸೋಮವಾರ ರಾತ್ರಿ ಹೊನ್ನಾಳಿಯಲ್ಲಿ ನಡೆದಿದೆ.
ಎಂ.ಪಿ.‌ ರೇಣುಕಾಚಾರ್ಯ
ಎಂ.ಪಿ.‌ ರೇಣುಕಾಚಾರ್ಯ
Updated on

ದಾವಣಗೆರೆ: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.‌ ರೇಣುಕಾಚಾರ್ಯ ಅವರ ಆಪ್ತ ಸಹಾಯಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಸೋಮವಾರ ರಾತ್ರಿ ಹೊನ್ನಾಳಿಯಲ್ಲಿ ನಡೆದಿದೆ.

ರೇಣುಕಾಚಾರ್ಯ ಅವರ ಆಪ್ತ ಸಹಾಯಕ ಪ್ರಜ್ವಲ್ ಎಂಬುವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಗಾಯಗೊಂಡಿರುವ ಪ್ರಜ್ವಲ್ ಅವರು ಹೊನ್ನಾಳಿ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಹಲ್ಲೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. 

ಈ ನಡುವೆ ಎಂ.ಪಿ. ರೇಣುಕಾಚಾರ್ಯ ಅವರು, ಆಸ್ಪತ್ರೆಗೆ ಭೇಟಿ ನೀಡಿ ಪ್ರಜ್ವಲ್ ಅವರ ಆರೋಗ್ಯ ವಿಚಾರಿಸಿದರು.‌ ಹಲ್ಲೆ ಮಾಡಿದವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com