ಬೆಂಗಳೂರು: ಇನ್ಸ್ ಪೆಕ್ಟರ್ ನಂದೀಶ್ ಆತ್ಮಹತ್ಯೆ ಪ್ರಕರಣದ ತನಿಖೆ ಪ್ರಾರಂಭಿಸಲು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಇನ್ಸ್ ಪೆಕ್ಟರ್ ನಂದೀಶ್ ಸಾವಿನ ಪ್ರಕರಣದ ಬಗ್ಗೆ ಎಲ್ಲಾ ಆಯಾಮಗಳಲ್ಲಿ ಸಂಪೂರ್ಣವಾಗಿ ವಿಸ್ತೃತ ತನಿಖೆ ಕೈಗೊಳ್ಳಲು ತಿಳಿಸಿದ್ದೇನೆ ಎಂದರು.
ಸಿದ್ದರಾಮಯ್ಯ ಅವರು ಸಾಲ ಪಡೆದಿರುವ ಬಗ್ಗೆ ಪತ್ರಿಕೆ ಯಲ್ಲಿ ಓದಿ ನನ್ನ ಗಮನಕ್ಕೆ ಬಂದಿದೆ. ಯಾವುದೇ ಆದರೂ ವ್ಯವಸ್ಥಿತವಾಗಿ ತನಿಖೆಯಾಗಬೇಕು. ರಮೇಶ್ ಅವರು ಲೋಕಾಯುಕ್ತಕ್ಕೆ ದೂರು ನೀಡುವುದಾಗಿ ಹೇಳಿದ್ದಾರೆ. ಕೊಟ್ಟರೆ ಆ ಪ್ರಕ್ರಿಯೆ ಯನ್ನು ಪ್ರಾರಂಭ ಮಾಡಲಾಗುತ್ತದೆ. ಈ ಸಂದರ್ಭದಲ್ಲಿ ನಾನು ವಿರೋಧ ಪಕ್ಷದ ರೀತಿಯಲ್ಲಿ ಯಾವುದೇ ವ್ಯಾಖ್ಯಾನ ಮಾಡುವುದಿಲ್ಲ. ಅವರಿಗೆ ಆಧಾರ ರಹಿತ ವಾಗಿ ವ್ಯಾಖ್ಯಾನ ಮಾಡುವ ರೂಢಿ ಇದೆ. ನಾನು ಹಾಗೆ ಮಾಡುವುದಿಲ್ಲ. ಸತ್ಯ ಹೊರಗೆ ಬರಲಿ ಎಂದರು.
ಈ ಮಧ್ಯೆ ಸೋಲಾರ್ ಹಗರಣ ತನಿಖೆಯಾಗುವುದೇ ಎಂಬ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಕಾದು ನೋಡಿ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದರು.
Advertisement
Advertisement