ಬೆಳಗಾವಿ ನೇಗಿನಹಾಳ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ: ಆಡಿಯೋ ಕ್ಲಿಪ್ ನಲ್ಲಿದ್ದ ಮಹಿಳೆಯರಿಗಾಗಿ ಪೊಲೀಸರ ಶೋಧ

ಬೆಳಗಾವಿಯ ನೇಗಿನಹಾಳ ಮಠದ ಲಿಂಗಾಯತ ಮಠಾಧೀಶ ಬಸವ ಸಿದ್ದಲಿಂಗ ಸ್ವಾಮೀಜಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಮಹಿಳೆಯರಿಗಾಗಿ ಹುಡುಕಾಟ ನಡೆಸಿದ್ದಾರೆ.
ನೇಗಿನಹಾಳ ಮಠಾಧೀಶ ಬಸವ ಸಿದ್ದಲಿಂಗ ಸ್ವಾಮೀಜಿ
ನೇಗಿನಹಾಳ ಮಠಾಧೀಶ ಬಸವ ಸಿದ್ದಲಿಂಗ ಸ್ವಾಮೀಜಿ
Updated on

ಬೆಳಗಾವಿ: ಬೆಳಗಾವಿಯ ನೇಗಿನಹಾಳ ಮಠದ ಲಿಂಗಾಯತ ಮಠಾಧೀಶ ಬಸವ ಸಿದ್ದಲಿಂಗ ಸ್ವಾಮೀಜಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಮಹಿಳೆಯರಿಗಾಗಿ ಹುಡುಕಾಟ ನಡೆಸಿದ್ದಾರೆ.

ವಿವಿಧ ಮಠಾಧೀಶರು ಲೈಂಗಿಕ ದೌರ್ಜನ್ಯದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಇಬ್ಬರು ಮಹಿಳೆಯರು ಫೋನ್  ನಲ್ಲಾ ಮಾತನಾಡಿದ್ದ ಸಂಭಾಷಣೆ ವೈರಲ್ ಆಗಿದ್ದು, ಸಾವಿಗೆ ಕಾರಣವಾಯಿತು ಎನ್ನಲಾಗಿದೆ.

ನೇಗಿನಹಾಳ್ ನಿವಾಸಿ ಸೋಮಪ್ಪ ಈರಪ್ಪ ಬಾಗೇವಾಡಿ ಎಂಬುವವರ ದೂರಿನ ಮೇರೆಗೆ ಇಬ್ಬರು ಮಹಿಳೆಯರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಬೈಲಹೊಂಗಲ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಯು.ಎಚ್.ಸಾತೇನಹಳ್ಳಿ ತಿಳಿಸಿದ್ದಾರೆ.  ಮಂಗಳವಾರ ನಡೆದ ಶ್ರೀಗಳ ಅಂತ್ಯಕ್ರಿಯೆಯಲ್ಲಿ ಹಲವಾರು ಗಣ್ಯರು ಮತ್ತು ರಾಜಕೀಯ ಮುಖಂಡರು ಭಾಗವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com