ಬೆಳ್ಳಾರೆ ಠಾಣೆ ಬಳಿ ಜಮಾಯಿಸಿದ ಹಿಂದೂ ಪರ ಕಾರ್ಯಕರ್ತರು
ರಾಜ್ಯ
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಸೋದರನಿಂದ ಜೀವ ಬೆದರಿಕೆ, ದೂರು ದಾಖಲು
ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರಿಯಲ್ಲಿ ಇತ್ತೀಚಿಗೆ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿ ಸೋದರನಿಂದ ಸಂಘ ಪರಿವಾರದ ಸಂಘಟನೆಯೊಂದರ ಮುಖಂಡನಿಗೆ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರಿಯಲ್ಲಿ ಇತ್ತೀಚಿಗೆ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿ ಸೋದರನಿಂದ ಸಂಘ ಪರಿವಾರದ ಸಂಘಟನೆಯೊಂದರ ಮುಖಂಡನಿಗೆ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಬೆಳ್ಳಾರೆ ಗ್ರಾಮದ ಪ್ರಶಾಂತ್ ಪೂಂಜ ಶನಿವಾರ ರಾತ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಶಫಿಕ್ ಸೋದರ ಶಾಫ್ರಿದ್ ದೂರವಾಣಿ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪ್ರಶಾಂತ್ ಪೂಂಜಾ ಒತ್ತಾಯಿಸಿದ್ದಾರೆ.
ಪ್ರಶಾಂತ್ ಪೂಂಜಾ ದೂರು ನೀಡಲು ಬಂದಾಗ ಅವರೊಂದಿಗೆ ನೂರಾರು ಹಿಂದೂ ಕಾರ್ಯಕರ್ತರು ಠಾಣೆ ಬಳಿ ಜಮಾಯಿಸಿದ್ದರು ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ