ಬೆಂಗಳೂರು ಪ್ರವಾಹ: 'ಮುಲಾಜೇ ಇಲ್ಲ.. ಕಾರ್ಯಾಚರಣೆ ಆರಂಭವಾಗಿದ್ದು, ಎಲ್ಲಾ ರಾಜಕಾಲುವೆಗಳ ತೆರವು'- ಸಿಎಂ ಬೊಮ್ಮಾಯಿ

ಮಳೆ ಪ್ರವಾಹಕ್ಕೆ ತುತ್ತಾಗಿರುವ ಬೆಂಗಳೂರಿನಲ್ಲಿ ಈಗಾಗಲೇ ಬಿಬಿಎಂಪಿ ರಾಜಕಾಲುವೆ ತೆರವು ಕಾರ್ಯಾಚರಣೆ ಆರಂಭಿಸಿದ್ದು, ಯಾವುದೇ ರೀತಿಯ ಮುಲಾಜಿಲ್ಲದೇ ಒತ್ತುವರಿಯನ್ನು ತೆರವುಗೊಳಿಸಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ
Updated on

ಬೆಂಗಳೂರು: ಮಳೆ ಪ್ರವಾಹಕ್ಕೆ ತುತ್ತಾಗಿರುವ ಬೆಂಗಳೂರಿನಲ್ಲಿ ಈಗಾಗಲೇ ಬಿಬಿಎಂಪಿ ರಾಜಕಾಲುವೆ ತೆರವು ಕಾರ್ಯಾಚರಣೆ ಆರಂಭಿಸಿದ್ದು, ಯಾವುದೇ ರೀತಿಯ ಮುಲಾಜಿಲ್ಲದೇ ಒತ್ತುವರಿಯನ್ನು ತೆರವುಗೊಳಿಸಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, 'ರಾಜಕಾಲುವೆ ಎಂದು ಕರೆಯಲ್ಪಡುವ ನೈಸರ್ಗಿಕ ಚರಂಡಿಗಳನ್ನು ಅತಿಕ್ರಮಿಸಿದವರು ಹೊಣೆಗಾರರಾಗಿದ್ದು, ಒತ್ತುವರಿದಾರರ ವಿರುದ್ಧ ಕ್ರಮಕೈಗೊಳ್ಳಲು ಹಾಗೂ ಒತ್ತುವರಿ ತೆರವುಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದರು.

ಒತ್ತುವರಿ ಜಾಗ ಪ್ರಭಾವಿ ಐಟಿ/ಬಿಟಿ ಕಂಪನಿಗಳ ಆಸ್ತಿಯಾಗಿದ್ದರೂ ರಾಜಕಾಲುವೆ ಮೇಲಿನ ಎಲ್ಲ ಅತಿಕ್ರಮಣಗಳನ್ನು ತೆರವುಗೊಳಿಸಲಾಗುವುದು. ಒತ್ತುವರಿ ತೆರವಿಗೆ ಸಂಬಂಧಪಟ್ಟಂತೆ ಆಯ್ದ ಜಾರಿಯ ಪ್ರಶ್ನೆಯೇ ಇಲ್ಲ. ರಾಜಕಾಲುವೆಗಳಲ್ಲಿ ನೀರು ನಿಲ್ಲದಂತೆ ನಿರ್ಮಿಸಿರುವ ಅಥವಾ ಮನೆಗಳನ್ನು ನಿರ್ಮಿಸಿರುವವರಿಗೆ ತೆರವು ನೋಟಿಸ್ ನೀಡಲಾಗಿದೆ. ಮಳೆನೀರು ಚರಂಡಿಗಳು ಮತ್ತು ನೈಸರ್ಗಿಕ ಜಲಮಾರ್ಗಗಳನ್ನು ಅತಿಕ್ರಮಿಸಿಕೊಂಡಿರುವ ಎಲ್ಲಾ ಆಸ್ತಿಗಳನ್ನು ತೆರವುಗೊಳಿಸಲಾಗುವುದು ಎಂದು ಬೊಮ್ಮಾಯಿ ಹೇಳಿದರು.

ಇತ್ತೀಚಿನ ಪ್ರವಾಹವು ಐಟಿ/ಬಿಟಿ ಕಂಪನಿಗಳು ಮತ್ತು ಅದರ ಉದ್ಯೋಗಿಗಳಿಗೆ ಮಾತ್ರವಲ್ಲದೆ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಸಾಮಾನ್ಯ ಜನರ ಮೇಲೂ ಪರಿಣಾಮ ಬೀರಿದೆ. ಸರ್ಕಾರವು ನ್ಯಾಯಾಲಯದಿಂದ ನಿರ್ದೇಶನವನ್ನು ಕೋರಿದೆ, ಪರಿಸ್ಥಿತಿಯನ್ನು ತಿಳಿಸಲಾಗುವುದು. ಈ ಹಿಂದೆ ಪ್ರವಾಹಕ್ಕೆ ಸಂಬಂಧಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಗಳು ಹಲವು ನಿರ್ದೇಶನಗಳನ್ನು ನೀಡಿದ್ದು, ಈ ಬಾರಿ ಬೃಹತ್ ಪ್ರಮಾಣದಲ್ಲಿ ಅತಿಕ್ರಮಣಗಳನ್ನು ತೆಗೆದುಹಾಕಲಾಗುವುದು ಎಂದು ಅವರು ಹೇಳಿದರು.

ಇದೇ ವಿಚಾರವಾಗಿ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ ಅವರು, ಮಳೆ ನೀರು ರಾಜಕಾಲುವೆಗಳಿಗೆ ಹರಿದಾಗ, ಈ ನೈಸರ್ಗಿಕ ಹರಿವು ಪ್ರವಾಹ ಉಂಟಾಗದಂತೆ ನೋಡಿಕೊಳ್ಳುತ್ತದೆ. ಹೀಗಾಗಿ ಅತಿಕ್ರಮಣ ತೆರವು ಕಾರ್ಯಾಚರಣೆ ಅನಿವಾರ್ಯವಾಗಿದೆ ಎಂದು ಹೇಳಿದರು.

ಮಹದೇವಪುರ ಮತ್ತು ಬೊಮ್ಮನಹಳ್ಳಿ ವಲಯದ ರಾಜಕಾಲುವೆ ಒತ್ತುವರಿ ತೆರವು ಕುರಿತು ಅಶೋಕ್, ‘ಕೆರೆ, ರಾಜಕಾಲುವೆಗಳ ಒತ್ತುವರಿ ತೆರವಿಗೆ ನೋಟಿಸ್‌ ನೀಡುವ ಅಗತ್ಯವಿಲ್ಲ. ಯಾವುದೇ ಸೂಚನೆಯಿಲ್ಲದೆ ಅದನ್ನು ತೆರವುಗೊಳಿಸಬಹುದು. ಅಕ್ರಮವಾಗಿ ಚರಂಡಿ ಒತ್ತುವರಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ನಾವು ನಿರಂತರವಾಗಿ ಅತಿಕ್ರಮಣಗಳನ್ನು ತೆರವುಗೊಳಿಸುತ್ತಿದ್ದೇವೆ. ಆಡಳಿತ ತಾರತಮ್ಯ ಮಾಡದೆ ಅತಿಕ್ರಮಣಗಳನ್ನು ತೆರವುಗೊಳಿಸಬೇಕು. ಒತ್ತುವರಿ ತೆರವುಗೊಳಿಸಿ ತೆರವು ಪ್ರಕ್ರಿಯೆ ಅನುಸರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಸ್ಥಳೀಯ ಶಾಸಕ ಸತೀಶ್ ರೆಡ್ಡಿ ಮಾತನಾಡಿ, ನನ್ನ ಕ್ಷೇತ್ರದಲ್ಲಿ 20ಕ್ಕೂ ಹೆಚ್ಚು ಕಡೆ ಒತ್ತುವರಿ ತೆರವು ಮಾಡಲಾಗುತ್ತಿದೆ. ಇದು ಐಟಿ ಪಾರ್ಕ್ ಅಥವಾ ಮನೆಯಾಗಿದ್ದರೂ ಪರವಾಗಿಲ್ಲ. ಮಾಲೀಕರು ಬಡವರಾಗಿದ್ದರೆ, ನಾವು ಅವರಿಗೆ ಪರ್ಯಾಯ ವ್ಯವಸ್ಥೆ ಮಾಡುತ್ತೇವೆ. ಬಿಡಿಎ, ಸೊಸೈಟಿ ಲೇಔಟ್ ಹಾಗೂ ಗಾಲ್ಫ್ ಕ್ಲಬ್ ಕೂಡ ಹಲವು ಕೆರೆಗಳನ್ನು ಒತ್ತುವರಿ ಮಾಡಿಕೊಂಡಿದ್ದು, ಕೃತಕವಾಗಿ ಕಸ ತುಂಬಿ ಲೇಔಟ್ ಗಳಾಗಿ ಮಾರ್ಪಡಿಸಿವೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com