ಸದನ ಸ್ವಾರಸ್ಯ: ಅಶೋಕ್ ನೀನು ಕಬಡ್ಡಿ ಆಡ್ತಿದ್ದೆ ಅಲ್ವಾ? ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ

ವಿಧಾನಸಭೆ ಕಲಾಪದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ- ಅಶೋಕ್ ನಡುವೆ ಸ್ವಾರಸ್ಯಕರವಾದ ಮಾತುಕತೆ ನಡೆಯಿತು.
ಕಂದಾಯ ಸಚಿವ ಆರ್ ಅಶೋಕ್
ಕಂದಾಯ ಸಚಿವ ಆರ್ ಅಶೋಕ್
Updated on

ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ- ಅಶೋಕ್ ನಡುವೆ ಸ್ವಾರಸ್ಯಕರವಾದ ಮಾತುಕತೆ ನಡೆಯಿತು.

ವಿಧಾನಸಭೆಯಲ್ಲಿ ಮಳೆ ಹಾನಿ ಕುರಿತಾಗಿ ನಿಯಮ 69 ಅಡಿಯಲ್ಲಿ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಇಂತಹದೊಂದು ಸ್ವಾರಸ್ಯಕರ ಮಾತುಕತೆ ನಡೆಯಿತು.

ಮಳೆಯಿಂದ ಒಟ್ಟು 24 ಸಾವಿರ ಮನೆಗಳು ಹಾನಿಗೀಡಾಗಿವೆ. 7647 ಕೋಟಿ 13 ಲಕ್ಷ ನಷ್ಟ ಹೇಳಿದ್ದೀರಿ. ಎಸ್ ಡಿ ಆರ್ ಎಫ್ ನಾರ್ಮ್ಸ್ ಪ್ರಕಾರ 1012 ಕೋಟಿ 50 ಲಕ್ಷ ಕೇಂದ್ರದ ಬಳಿ ಪರಿಹಾರ ಕೇಳಿದ್ದೀರಿ. ಆದರೆ ಕೇಂದ್ರ ಇಲ್ಲಿಯವರೆಗೂ ಒಂದೇ ಒಂದು ಪೈಸೆ ಕೊಟ್ಟಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಈ ವೇಳೆ ಕಂದಾಯ ಸಚಿವ ಆರ್. ಅಶೋಕ್ ಎದ್ದು ನಿಂತರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಅಶೋಕ್ ನಿಲ್ಲಬೇಡಿ, ಯಾಕೆ ವ್ಯಾಯಾಮ ಮಾಡ್ತೀರಿ? ನಿನ್ನ ಎನರ್ಜಿ ಚೆನ್ನಾಗಿ ಇದೆ. ನೀನು ದೈಹಿಕವಾಗಿ ಗಟ್ಟಿ ಇದ್ದೀಯಾ, ಕಬಡ್ಡಿ ಆಡ್ತಿದ್ದೆ ಅಲ್ವಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಇದಕ್ಕೆ ಮರುತ್ತರ ನೀಡಿದ ಸಚಿವ ಅಶೋಕ್, ಹೌದು 20 ವರ್ಷ ಆಡಿದ್ದೇನೆ ಎಂದರು. '"ನಾನು ಹೈಸ್ಕೂಲ್ ದಿನದಲ್ಲಿ ಆಡುತ್ತಿದ್ದೆ. ಆಮೇಲೆ ಬಿಟ್ಟೆ. ಆಮೇಲೆ ಆಡೋಕೆ ಆಗ್ಲೆ ಇಲ್ಲ. ಈಗ ಯಾವ ಆಟ ಆಡೋಕು ಆಗೋದಿಲ್ಲ ಎಂದರು ಸಿದ್ದರಾಮಯ್ಯ. ಕಬ್ಬಡಿ ಆಡಿದರೆ ಶುಗರ್ ಬಿಪಿ ಬರಲ್ಲ ಸರ್ ಎಂದು ಆರ್. ಅಶೋಕ್ ಉತ್ತರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com