ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೊಜಕರಾಗಿ ಪತ್ರಕರ್ತ ಶಂಕರ್ ಪಾಗೊಜಿ ನೇಮಕವಾಗಿದ್ದಾರೆ.
ಮುಂದಿನ ಆದೇಶದವರೆಗೆ ಗುತ್ತಿಗೆ ಆಧಾರ ಮೇಲೆ ಮುಖ್ಯಮಂತ್ರಿಯವರ ಮಾಧ್ಯಮ ಸಂಯೋಜಕರಾಗಿ ಶಂಕರ್ ಪಾಗೋಜಿಯವರನ್ನು ನೇಮಕ ಮಾಡಲಾಗುವುದು ಎಂದು ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶದಲ್ಲಿ ತಿಳಿಸಿದೆ.
ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾಗಿ ಈ ಹಿಂದೆ ಕೆಲಸ ಮಾಡುತ್ತಿದ್ದ ಗುರುಲಿಂಗ ಸ್ವಾಮಿ ಹೊಳಿಮಠ ತೀವ್ರ ಹೃದಯಾಘಾತದಿಂದ ಇತ್ತೀಚೆಗೆ ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಶಂಕರ್ ಪಾಗೋಜಿಯವರನ್ನು ನೇಮಕ ಮಾಡಲಾಗಿದೆ.
Advertisement