ಬೆಂಗಳೂರಿನಲ್ಲಿ ಟೋಯಿಂಗ್ ವ್ಯವಸ್ಥೆ ಮತ್ತೆ ಜಾರಿ ಮಾಡಲ್ಲ: ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು ನಗರದಲ್ಲಿ ಸ್ಥಗಿತಗೊಳಿಸಲಾಗಿರವ ಟೋಯಿಂಗ್ ವ್ಯವಸ್ಥೆಯನ್ನು ಪುನಃ ಜಾರಿಗೊಳಿಸುವ ಯಾವುದೇ ಪ್ರಸ್ತಾವನೆ ಸದ್ಯಕ್ಕೆ, ಸರ್ಕಾರದ ಮುಂದಿಲ್ಲ ವೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಬೆಂಗಳೂರು ನಗರದಲ್ಲಿ ಸ್ಥಗಿತಗೊಳಿಸಲಾಗಿರವ ಟೋಯಿಂಗ್ ವ್ಯವಸ್ಥೆಯನ್ನು ಪುನಃ ಜಾರಿಗೊಳಿಸುವ ಯಾವುದೇ ಪ್ರಸ್ತಾವನೆ ಸದ್ಯಕ್ಕೆ, ಸರ್ಕಾರದ ಮುಂದಿಲ್ಲ ವೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಸಚಿವರು, ನಗರದಲ್ಲಿ ಸಾರ್ವಜನಿಕ ಸ್ನೇಹಿ ಮತ್ತು ಸುಗಮ ವಾಹನ ಪಾರ್ಕಿಂಗ್ ವ್ಯವಸ್ಥೆ, ಜಾರಿಗೊಳಿಸುವ ಬಗ್ಗೆ, ವಿಸ್ತೃತವಾದ ಚರ್ಚೆ ಹಾಗೂ ತಜ್ಞರ ಸಲಹೆ ಪಡೆದು, ತೀರ್ಮಾನ ಕೈಗೊಳ್ಳಲಾಗುವುದು.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೂ ಈ ಬಗ್ಗೆ ಚರ್ಚೆ ನಡೆಸಿದ್ದು, ಟೋಯಿಂಗ್ ಬಗ್ಗೆ ಯಾವುದೇ ಅಂತಿಮ ತೀರ್ಮಾನವಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಟೋಯಿಂಗ್ ವ್ಯವಸ್ಥೆ ಬಗ್ಗೆ ಇದ್ದ ಜನಾಕ್ರೋಶ ಹಾಗೂ ಕಿರುಕುಳಗಳ ಬಗ್ಗೆ ಬಂದ ದೂರುಗಳ ಹಿನ್ನೆಲೆಯಲ್ಲಿ, ಸ್ಥಗಿತಗೊಳಿಸಲಾಗಿತ್ತು ಎಂದು ನೆನಪಿಸಿದ ಸಚಿವರು, ಹಳೆಯ ವ್ಯವಸ್ಥೆಯನ್ನು ಪುನಃ ಜಾರಿಗೊಳಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com