ಸಂಸ್ಕೃತ ಭಾಷೆಗೆ ಕರ್ನಾಟಕದಲ್ಲಿ ಪೋಷಣೆ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಶ್ಲಾಘನೆ

ಸುಮಾರು 35,000 ವಿದ್ಯಾರ್ಥಿಗಳು ಸಂಸ್ಕೃತ ಕಲಿಯಲು ಪ್ರೋತ್ಸಾಹಿಸುತ್ತಿರುವ ಕರ್ನಾಟಕದ ಪ್ರಯತ್ನಗಳನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶ್ಲಾಘಿಸಿದ್ದಾರೆ.
ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
Updated on

ಬೆಂಗಳೂರು: ಸುಮಾರು 35,000 ವಿದ್ಯಾರ್ಥಿಗಳು ಸಂಸ್ಕೃತ ಕಲಿಯಲು ಪ್ರೋತ್ಸಾಹಿಸುತ್ತಿರುವ ಕರ್ನಾಟಕದ ಪ್ರಯತ್ನಗಳನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶ್ಲಾಘಿಸಿದ್ದಾರೆ.

ಪ್ರಪಂಚದಾದ್ಯಂತದ ವಿಶ್ವವಿದ್ಯಾನಿಲಯಗಳೊಂದಿಗೆ ಜಾಗತಿಕ ಸಹಯೋಗಕ್ಕಾಗಿ  ಭಾಷೆಗೆ ಅವರ ಕೊಡುಗೆಯನ್ನು ಅರ್ಥಮಾಡಿಕೊಳ್ಳಲು ಮತ್ತು ವಿಚಾರಗಳನ್ನು ವಿನಿಮಯ ಮಾಡಿಕೊಳ್ಳುವ ಮಾರ್ಗಗಳನ್ನು ಕಂಡುಕೊಳ್ಳಲು ಪ್ರಯತ್ನಿಸಬೇಕು ಎಂದು ನಿರ್ಮಲಾ ಸೀತಾರಾಮನ್ ಸಲಹೆ ನೀಡಿದರು.

ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯದ ವೆಬ್ ಸೈಟ್ ಅನ್ನು ನಿರ್ಮಲಾ ಸೀತಾರಾಮನ್ ಉದ್ಘಾಟಿಸಿದರು.  ಜಾಗತಿಕ ಪ್ರವೇಶಕ್ಕಾಗಿ ವೆಬ್‌ಸೈಟ್‌ಗೆ ಹೆಚ್ಚಿನ ಪ್ರತಿಗಳನ್ನು ಸೇರಿಸಬೇಕು ಎಂದು ಸಲಹೆ ನೀಡಿದರು.

ಗುರುವಾರ ಬೆಂಗಳೂರಿನಲ್ಲಿ ನಡೆದ 'ಸಂಸ್ಕೃತ ಸಪ್ತಾಹ ಆಚರಣೆ 2022' ಮತ್ತು ಪದವಿ ಪೂರ್ವ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿದ್ದರು. ಸಂಸ್ಕೃತ ವಿದ್ವಾಂಸ ಮತ್ತು ಕವಿ ಡಾ.ಶತಾವಧಾನಿ ಆರ್ ಗಣೇಶ್ ಅವರನ್ನು ಸನ್ಮಾನಿಸಲಾಯಿತು. ಕರ್ನಾಟಕವನ್ನು ತಮಿಳುನಾಡಿಗೆ ಹೋಲಿಸಿದ ಅವರು  ನೆರೆಯ ರಾಜ್ಯಕ್ಕಿಂತ ಸಂಸ್ಕೃತವನ್ನು ಕರ್ನಾಟಕ ಹೆಚ್ಚು ಪ್ರಚಾರ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಂಡ ಕ್ರಮಗಳನ್ನು ವಿವರಿಸಿದರು. ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಶ್ರೀನಿವಾಸ ವರಖೇಡಿ ಅವರು ಸಂಸ್ಕೃತದ ಮಹತ್ವವನ್ನು ವಿವರಿಸಿ ಮಾತನಾಡಿ, ರಾಜ್ಯದ ಪ್ರತಿಯೊಂದು ಜಿಲ್ಲೆ ಅಥವಾ ಗ್ರಾಮಗಳಲ್ಲಿ ಸಂಸ್ಕೃತ ಭಾಷೆಯೂ ಜೀವನದ ಭಾಗವಾಗಿದೆ. ವಿದ್ಯಾರ್ಥಿಗಳಿಗೆ ಕಲಿಸಲು ಸಂಸ್ಕೃತದಲ್ಲಿ ಎಲ್ಲಾ ಅಧ್ಯಯನ ಸಂಪನ್ಮೂಲಗಳು ಲಭ್ಯವಿದ್ದು, ಶಿಕ್ಷಕರು ಅದನ್ನು ಗೌರವಿಸಬೇಕು ಎಂದು ವರಖೇಡಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com