ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ ಆರೋಪಿಗಳಿಗೆ ಬಾಂಗ್ಲಾದೇಶ ಸಂಪರ್ಕ
ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧಿತರಲ್ಲಿ ಕೆಲವರು ನೆರೆಯ ರಾಷ್ಟ್ರದೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಶಂಕೆಯಲ್ಲಿ ಕೇಂದ್ರ ಗುಪ್ತಚರ ತಂಡ ಇತ್ತೀಚೆಗೆ ಹುಬ್ಬಳ್ಳಿಗೆ ಭೇಟಿ ನೀಡಿ ವಿಚಾರಣೆ ನಡೆಸಿದೆ.
Published: 30th April 2022 08:15 AM | Last Updated: 30th April 2022 01:38 PM | A+A A-

ಹುಬ್ಬಳ್ಳಿ ಗಲಭೆಯಲ್ಲಿ ಹಾನಿಗೀಡಾದ ಪೊಲೀಸ್ ವಾಹನ
ಹುಬ್ಬಳ್ಳಿ: ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧಿತರಲ್ಲಿ ಕೆಲವರು ನೆರೆಯ ರಾಷ್ಟ್ರದೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಶಂಕೆಯಲ್ಲಿ ಕೇಂದ್ರ ಗುಪ್ತಚರ ತಂಡ ಇತ್ತೀಚೆಗೆ ಹುಬ್ಬಳ್ಳಿಗೆ ಭೇಟಿ ನೀಡಿ ವಿಚಾರಣೆ ನಡೆಸಿದೆ.
ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ನಡೆದ ಗಲಭೆಯ ನಂತರ ಪೊಲೀಸರು ಕಲ್ಲು ತೂರಾಟ ನಡೆಸಿ ಹಿಂಸಾಚಾರಕ್ಕೆ ಕಾರಣರಾದ ಒಟ್ಟು 154 ಮಂದಿಯನ್ನು ಬಂಧಿಸಿದ್ದರು. ಹಿಂಸಾಚಾರದ ನಂತರ ಕೆಲವು ಆರೋಪಿಗಳು ನಗರದಿಂದ ಪರಾರಿಯಾಗಿದ್ದಾರೆ, ನಂತರ ಅವರನ್ನು ಪತ್ತೆಹಚ್ಚಿ ಬಂಧಿಸಲಾಯಿತು.
ಆರೋಪಿಗಳಲ್ಲಿ ಒಬ್ಬನಿಗೆ ಬಾಂಗ್ಲಾದೇಶದೊಂದಿಗೆ ಸಂಪರ್ಕವಿದೆ ಎಂದು ದೂರವಾಣಿ ಕರೆ ದಾಖಲೆಗಳು ತೋರಿಸುತ್ತವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹೀಗಾಗಿ ಕೇಂದ್ರ ಗುಪ್ತಚರ ತಂಡ ಇತರೆಡೆಯಿಂದ ನಗರಕ್ಕೆ ಭೇಟಿ ನೀಡಿ ಆರೋಪಿಗಳ ವಿಚಾರಣೆ ನಡೆಸಿದೆ.
ಇದನ್ನೂ ಓದಿ: ಹುಬ್ಬಳ್ಳಿ ಗಲಭೆ: ವಿವಾದಾತ್ಮಕ ಪೋಸ್ಟ್ ಹಾಕಿದ್ದ ಅಭಿಷೇಕ್ ಹಿರೇಮಠ ಜಾಮೀನು ಅರ್ಜಿ ವಜಾ
ಆದರೆ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲು ಪೊಲೀಸರು ನಿರಾಕರಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಲಾಭು ರಾಮ್ ಅವರು ತನಿಖೆ ನಡೆಸುತ್ತಿದ್ದಾರೆ. ಬಂಧಿತರ ನ್ಯಾಯಾಂಗ ಬಂಧನವು ಇಂದು ಕೊನೆಗೊಳ್ಳಲಿದ್ದು, ಬಂಧನ ಅವಧಿಯನ್ನು ವಿಸ್ತರಿಸುವಂತೆ ನ್ಯಾಯಾಲಯ ಮುಂದೆ ಪೊಲೀಸರು ಮನವಿ ಮಾಡಿಕೊಳ್ಳುವ ಸಾಧ್ಯತೆಯಿದೆ.
ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ವಿರುದ್ಧ ಬಿಜೆಪಿ ತಿರುಗೇಟು: ಕಾಂಗ್ರೆಸ್ ಮುಖಂಡ ಜಮೀರ್ ಅಹ್ಮದ್ ಖಾನ್ ಆರೋಪಿಗಳ ಕುಟುಂಬ ಸದಸ್ಯರಿಗೆ 5 ಸಾವಿರ ರೂಪಾಯಿ ಮತ್ತು ಪಡಿತರ ಕಿಟ್ಗಳನ್ನು ವಿತರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನು ಖಂಡಿಸಿ ಬಿಜೆಪಿ ಸದಸ್ಯರು ಪೊಲೀಸರಿಗೆ ಪತ್ರ ಬರೆದಿದ್ದಾರೆ.