ಪ್ರತಿಭಟನೆ ನಡುವೆ ಆಗಸ್ಟ್ 8 ರಿಂದ ಕೆಸಿಇಟಿ ದಾಖಲೆ ಪರಿಶೀಲನೆ ಆರಂಭ
ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರ ನಿವಾಸ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಬಳಿ ಬೃಹತ್ ಪ್ರತಿಭಟನೆ ನಡುವೆ ಆಗಸ್ಟ್ 5 ರಿಂದ ಆರಂಭವಾಗಬೇಕಿದ್ದ ಕೆ ಸಿಇಟಿ ದಾಖಲೆ ಪರಿಶೀಲನೆಯನ್ನು ಪ್ರಾಧಿಕಾರ ಮುಂದೂಡಿದೆ.
Published: 03rd August 2022 02:19 PM | Last Updated: 03rd August 2022 02:19 PM | A+A A-

ವಿದ್ಯಾರ್ಥಿಗಳ ಪ್ರತಿಭಟನೆಯ ಚಿತ್ರ
ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರ ನಿವಾಸ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಬಳಿ ಬೃಹತ್ ಪ್ರತಿಭಟನೆ ನಡುವೆ ಆಗಸ್ಟ್ 5 ರಿಂದ ಆರಂಭವಾಗಬೇಕಿದ್ದ ಕೆ ಸಿಇಟಿ ದಾಖಲೆ ಪರಿಶೀಲನೆಯನ್ನು ಪ್ರಾಧಿಕಾರ ಮುಂದೂಡಿದೆ. ಕೆಸಿಇಟಿ ಅಂಕಗಳು ಮತ್ತು ಶ್ರೇಯಾಂಕಗಳಲ್ಲಿ ಪುನರಾವರ್ತಿತರಿಗೆ 2021 ರ ಪಿಯು ಅಂಕಗಳನ್ನು ಸೇರಿಸದ ಪ್ರಾಧಿಕಾರದ ನಿರ್ಧಾರಕ್ಕೆ ಪೋಷಕರು ಮತ್ತು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆದಾಗ್ಯೂ, ಇತರ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲಿದೆ ಎಂಬುದು ಸಾಬೀತಾಗಿರುವುದರಿಂದ ಕೆಇಎ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಸಚಿವ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಈ ಕುರಿತು ಮಂಗಳವಾರ ರಾತ್ರಿ ಟ್ವೀಟ್ ಮಾಡಿರುವ ಸಚಿವರು, 3 ಲಕ್ಷ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 2021-22ನೇ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆ ಹೊಂದಿ ಈ ವರ್ಷವೂ ಪುನಃ ಸಿಇಟಿ ಬರೆದಿರುವ 24,000 ವಿದ್ಯಾರ್ಥಿಗಳ ಪಿಯುಸಿ ಅಂಕಗಳನ್ನು ಪರಿಗಣಿಸದಿರಲು ಕೆಇಎ ನಿರ್ಧರಿಸಿದ್ದು ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ತಿಳಿಸಲಾಗಿದೆ ಎಂದಿದ್ದಾರೆ.
3 ಲಕ್ಷ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 2021-22ನೇ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ PUCಯಲ್ಲಿ ತೇರ್ಗಡೆ ಹೊಂದಿ ಈ ವರ್ಷವೂ ಪುನಃ CET ಬರೆದಿರುವ 24,000 ವಿದ್ಯಾರ್ಥಿಗಳ PUC ಅಂಕಗಳನ್ನು ಪರಿಗಣಿಸದಿರಲು KEA ನಿರ್ಧರಿಸಿದ್ದು ಇದರಲ್ಲಿ ಯಾವುದೇ ಬದಲಾವಣೆ ಇಲ್ಲ.
— Dr. Ashwathnarayan C. N. (@drashwathcn) August 2, 2022
ಈ ಬಗ್ಗೆ ಮುಖ್ಯಮಂತ್ರಿ @BSBommai ಅವರಿಗೂ ಮಾಹಿತಿ ನೀಡಲಾಗಿದೆ.
1/3
ಇದರ ಹೊರತಾಗಿಯೂ, ಆಗಸ್ಟ್ 5 ರಿಂದ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಉಪವಾಸವನ್ನು ಪ್ರಾರಂಭಿಸುವುದಾಗಿ ಪೋಷಕರು ಮತ್ತು ವಿದ್ಯಾರ್ಥಿಗಳು ಹೇಳಿದ್ದಾರೆ. ವಿದ್ಯಾರ್ಥಿಗಳಿಗೆ ತಿಳುವಳಿಕೆ ನೀಡದ ಕಾರಣ ಮತ್ತು ಈ ಹಿಂದೆ ಪ್ರಾಧಿಕಾರದಿಂದ ಯಾವುದೇ ಘೋಷಣೆ ಮಾಡದ ಕಾರಣ ಈ ನಿರ್ಧಾರ ಅಭೂತಪೂರ್ವವಾಗಿದೆ ಎಂದು ಅವರು ಹೇಳಿದ್ದಾರೆ.