ಪ್ರತಿಭಟನೆ ನಡುವೆ ಆಗಸ್ಟ್ 8 ರಿಂದ ಕೆಸಿಇಟಿ ದಾಖಲೆ ಪರಿಶೀಲನೆ ಆರಂಭ

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರ ನಿವಾಸ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಬಳಿ ಬೃಹತ್ ಪ್ರತಿಭಟನೆ ನಡುವೆ ಆಗಸ್ಟ್ 5 ರಿಂದ ಆರಂಭವಾಗಬೇಕಿದ್ದ ಕೆ ಸಿಇಟಿ ದಾಖಲೆ ಪರಿಶೀಲನೆಯನ್ನು ಪ್ರಾಧಿಕಾರ ಮುಂದೂಡಿದೆ.
ವಿದ್ಯಾರ್ಥಿಗಳ ಪ್ರತಿಭಟನೆಯ ಚಿತ್ರ
ವಿದ್ಯಾರ್ಥಿಗಳ ಪ್ರತಿಭಟನೆಯ ಚಿತ್ರ

ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರ ನಿವಾಸ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಬಳಿ ಬೃಹತ್ ಪ್ರತಿಭಟನೆ ನಡುವೆ ಆಗಸ್ಟ್ 5 ರಿಂದ ಆರಂಭವಾಗಬೇಕಿದ್ದ ಕೆ ಸಿಇಟಿ ದಾಖಲೆ ಪರಿಶೀಲನೆಯನ್ನು ಪ್ರಾಧಿಕಾರ ಮುಂದೂಡಿದೆ. ಕೆಸಿಇಟಿ ಅಂಕಗಳು ಮತ್ತು ಶ್ರೇಯಾಂಕಗಳಲ್ಲಿ ಪುನರಾವರ್ತಿತರಿಗೆ 2021 ರ ಪಿಯು ಅಂಕಗಳನ್ನು ಸೇರಿಸದ ಪ್ರಾಧಿಕಾರದ ನಿರ್ಧಾರಕ್ಕೆ ಪೋಷಕರು ಮತ್ತು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದಾಗ್ಯೂ, ಇತರ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲಿದೆ ಎಂಬುದು ಸಾಬೀತಾಗಿರುವುದರಿಂದ ಕೆಇಎ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಸಚಿವ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಈ ಕುರಿತು ಮಂಗಳವಾರ ರಾತ್ರಿ ಟ್ವೀಟ್ ಮಾಡಿರುವ ಸಚಿವರು,  3 ಲಕ್ಷ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 2021-22ನೇ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆ ಹೊಂದಿ ಈ ವರ್ಷವೂ ಪುನಃ ಸಿಇಟಿ ಬರೆದಿರುವ 24,000 ವಿದ್ಯಾರ್ಥಿಗಳ ಪಿಯುಸಿ ಅಂಕಗಳನ್ನು ಪರಿಗಣಿಸದಿರಲು ಕೆಇಎ ನಿರ್ಧರಿಸಿದ್ದು ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ತಿಳಿಸಲಾಗಿದೆ ಎಂದಿದ್ದಾರೆ. 

ಇದರ ಹೊರತಾಗಿಯೂ, ಆಗಸ್ಟ್ 5 ರಿಂದ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸವನ್ನು ಪ್ರಾರಂಭಿಸುವುದಾಗಿ ಪೋಷಕರು ಮತ್ತು ವಿದ್ಯಾರ್ಥಿಗಳು ಹೇಳಿದ್ದಾರೆ. ವಿದ್ಯಾರ್ಥಿಗಳಿಗೆ ತಿಳುವಳಿಕೆ ನೀಡದ ಕಾರಣ ಮತ್ತು ಈ ಹಿಂದೆ ಪ್ರಾಧಿಕಾರದಿಂದ ಯಾವುದೇ ಘೋಷಣೆ ಮಾಡದ ಕಾರಣ ಈ ನಿರ್ಧಾರ ಅಭೂತಪೂರ್ವವಾಗಿದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com