ಚಿಕ್ಕಬಳ್ಳಾಪುರ: ಆಟವಾಡಲು ತೆರಳಿದ್ದ ಮೂವರು ಬಾಲಕರು ಕೆರೆಯಲ್ಲಿ ಮುಳುಗಿ ಸಾವು

ಆಟವಾಡಲು ತೆರಳಿದ್ದ ಮೂವರು ಬಾಲಕರು ನೀರುಪಾಲಾಗಿರುವ ಘಟನೆ ಮಂಗಳವಾರ ಸಂಜೆ ಚಿಂತಾಮಣಿ ತಾಲೂಕಿನ ಕೊಡೆಗಂಡ್ಲು ಗ್ರಾಮದಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚಿಕ್ಕಬಳ್ಳಾಪುರ: ಆಟವಾಡಲು ತೆರಳಿದ್ದ ಮೂವರು ಬಾಲಕರು ನೀರುಪಾಲಾಗಿರುವ ಘಟನೆ ಮಂಗಳವಾರ ಸಂಜೆ ಚಿಂತಾಮಣಿ ತಾಲೂಕಿನ ಕೊಡೆಗಂಡ್ಲು ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕರನ್ನು ರಾಮ(10) ಲಕ್ಷ್ಮಣ(10) ಹಾಗೂ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಬಾಲಕರು ಶಾಲೆಯಿಂದ ಮನೆಗೆ ಬಂದ ನಂತರ ಕೆರೆ ಬಳಿ ಆಟವಾಡಲು ತೆರಳಿದ್ದರು. ಈ ವೇಳೆ ಬಾಲಕರು ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾಗಿದ್ದಾರೆ. 

ಸ್ಥಳಿಯರು ಮೂವರು ಬಾಲಕರ ಶವಗಳನ್ನು ಹೊರಕ್ಕೆ ತೆಗೆದಿದ್ದಾರೆ. ವೆಂಕಟೇಶ ಎಂಬುವರ ಅವಳಿ ಜವಳಿ ಮಕ್ಕಳು. ಮತ್ತು ಮುನಿರಾಜು ಎಂಬುವರ ಮಗ ಪ್ರಜ್ವಾಲ್ ಸಾವನ್ನಪ್ಪಿದ್ದಾರೆ. 

ಈ ಸಂಬಂಧ ಕೆಂಚಾರ್ಲಹಳ್ಳಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com