ಮಡಿಕೇರಿ: ಕಾಡಾನೆ ದಾಳಿಗೆ ಬಡ ದಿನಗೂಲಿ ಸಾವು

ಮಡಿಕೇರಿ ತಾಲೂಕಿನ ಚೆಟ್ಟಳ್ಳಿಯಲ್ಲಿ ಆನೆ ದಾಳಿಗೆ ದಿನಗೂಲಿಯೊಬ್ಬರು ಸಾವನ್ನಪ್ಪಿದ್ದಾರೆ. 
ಆನೆ ದಾಳಿ
ಆನೆ ದಾಳಿ

ಮಡಿಕೇರಿ: ಮಡಿಕೇರಿ ತಾಲೂಕಿನ ಚೆಟ್ಟಳ್ಳಿಯಲ್ಲಿ ಆನೆ ದಾಳಿಗೆ ದಿನಗೂಲಿಯೊಬ್ಬರು ಸಾವನ್ನಪ್ಪಿದ್ದಾರೆ. 

ಬುಧವಾರ ಬೆಳಗಿನ ಜಾವ ಈ ಘಟನೆ ನಡೆದಿದೆ. ಚೆಟ್ಟಳ್ಳಿ ಸಮೀಪದ ಮಲ್ಕೋಡ್ ಗ್ರಾಮದ ನಿವಾಸಿ 60 ವರ್ಷದ ಮಹಮ್ಮದ್ ಮೃತವ್ಯಕ್ತಿ. ಬೆಳಗ್ಗೆ 7 ಗಂಟೆ ಸುಮಾರಿಗೆ ಮೊಹಮ್ಮದ್ ಕೆಲಸಕ್ಕೆಂದು ಕಂದಕೆರೆ ಗ್ರಾಮಕ್ಕೆ ನಡೆದುಕೊಂಡು ಹೋಗುತ್ತಿದ್ದಾಗ ದಾರಿ ಮಧ್ಯೆ ಕಾಡಾನೆ ದಾಳಿ ಮಾಡಿದೆ. 

ದಾಳಿಯಲ್ಲಿ ಮೊಹಮ್ಮದ್ ಬೆನ್ನು ಮತ್ತು ಕೈಗಳಿಗೆ ಗಂಭೀರ ಗಾಯಗಳಾಗಿತ್ತು. ಜೋರಾಗಿ ಕೂಗಿಕೊಂಡಿದ್ದರಿಂದ ಇತರ ಗ್ರಾಮಸ್ಥರನ್ನು ಅಲ್ಲಿಗೆ ತೆರಳಿದಾಗ ರಸ್ತೆಯ ಮೇಲೆ ಆತ ಅಂಗಾತ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಅವರನ್ನು ಮಡಿಕೇರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಥಮ ಚಿಕಿತ್ಸೆ ನಂತರ ಉತ್ತಮ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ರವಾನಿಸಲಾಯಿತು.

ಆದರೆ, ತೀವ್ರ ಗಾಯಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಮೊಹಮ್ಮದ್ ಪತ್ನಿಯನ್ನು ಅಗಲಿದ್ದು ಬಡ ದಂಪತಿಗೆ ಮಕ್ಕಳಿಲ್ಲ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಘಟನೆ ದಾಖಲಾಗಿದೆ. ಮಡಿಕೇರಿ ಡಿಸಿಎಫ್ ಪೊವಯ್ಯ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com