ಬೆಂಗಳೂರು ಗ್ರಾಮಾಂತರಕ್ಕೆ ದೇವನಹಳ್ಳಿ ಜಿಲ್ಲಾ ಕೇಂದ್ರ ಸ್ಥಾನಮಾನ: ಸಚಿವ ಸುಧಾಕರ್

ಸ್ವಾತಂತ್ರ್ಯ ದಿನಾಚರಣೆಯಂದು ಸಚಿವ ಡಾ. ಕೆ ಸುಧಾಕರ್ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ದೇವನಹಳ್ಳಿ ಜಿಲ್ಲಾ ಕೇಂದ್ರ ಎಂದು ಘೋಷಣೆ ಮಾಡಿದ್ದಾರೆ. 
ಡಾ. ಕೆ ಸುಧಾಕರ್
ಡಾ. ಕೆ ಸುಧಾಕರ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆಯಂದು ಸಚಿವ ಡಾ. ಕೆ ಸುಧಾಕರ್ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ದೇವನಹಳ್ಳಿ ಜಿಲ್ಲಾ ಕೇಂದ್ರ ಎಂದು ಘೋಷಣೆ ಮಾಡಿದ್ದಾರೆ. 

ಒಂದು ತಿಂಗಳಿನಲ್ಲಿ ರಾಜ್ಯ ಸರ್ಕಾರದಿಂದ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಾಗುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಸಚಿವರು ಹೇಳಿದ್ದು ಈ ಮೂಲಕ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರ ಗೊಂದಲಕ್ಕೆ ತೆರೆಬಿದ್ದಿದೆ. 

75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ದೇವನಹಳ್ಳಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಅವರು ದೇವನಹಳ್ಳಿ ಜಿಲ್ಲಾ ಕೇಂದ್ರದ ಬಹುದಿನಗಳ ಬೇಡಿಕೆಗೆ ಇದೀಗ ಈಡೇರಿದೆ. ಜಿಲ್ಲಾ ಕೇಂದ್ರಕ್ಕಾಗಿ ದೇವನಹಳ್ಳಿ ದೊಡ್ಡಬಳ್ಳಾಪುರ ನಡುವೆ ಜಗಳ ಶುರುವಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com