ತುಮಕೂರು: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ, ಇಬ್ಬರು ಮಕ್ಕಳು ಸೇರಿದಂತೆ ಮೂವರ ದಾರುಣ ಸಾವು

ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತರೂರು ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ಲಾರಿಗೆ ಗುದ್ದಿದ ಸ್ವಿಫ್ಟ್ ಕಾರು
ಲಾರಿಗೆ ಗುದ್ದಿದ ಸ್ವಿಫ್ಟ್ ಕಾರು

ತುಮಕೂರು: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತರೂರು ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

ಕಾರಿನಲ್ಲಿ ತೆರಳುತ್ತಿದ್ದ ತಂದೆ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಅವಿನಾಶ್(28), ಪ್ರಣತಿ(5), ಸೌಖ್ಯ(3) ಮೃತ ದುರ್ದೈವಿಗಳು. ಮುಂದೆ ಚಲಿಸುತ್ತಿದ್ದ ಲಾರಿಗೆ ಸ್ವಿಫ್ಟ್ ಕಾರು ಡಿಕ್ಕಿಯಾಗಿದೆ. ಲಾರಿಗೆ ಸ್ವಿಫ್ಟ್ ಕಾರು ಗುದ್ದಿದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.

ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಗಾಯಾಳು ಬಾಲಕಿ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಈ ಬಗ್ಗೆ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com