ಶಿರಾ ಬಳಿ ಅಪಘಾತ: ಮೃತರ ಕುಟುಂಬಸ್ಥರಿಗೆ 2 ಲಕ್ಷ, ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ ಪ್ರಧಾನಿ, ಸಿಎಂ ಕಂಬನಿ

ತುಮಕೂರು ಜಿಲ್ಲೆಯ ಶಿರಾ ಬಳಿಯ ಕಳ್ಳಂಬೆಳ್ಳದಲ್ಲಿ ಗುರುವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ 9 ಮಂದಿ ಕೂಲಿ ಕಾರ್ಮಿಕರ ಕುಟುಂಬಸ್ಥರಿಗೆ ಪ್ರಧಾನ ಮಂತ್ರಿ ನೈಸರ್ಗಿಕ ವಿಕೋಪ ಪರಿಹಾರ ನಿಧಿ (PMNRF) ಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.
ಶಿರಾ ಬಳಿ ಸಂಭವಿಸಿದ ಭೀಕರ ಅಪಘಾತದ ದೃಶ್ಯ
ಶಿರಾ ಬಳಿ ಸಂಭವಿಸಿದ ಭೀಕರ ಅಪಘಾತದ ದೃಶ್ಯ
Updated on

ನವದೆಹಲಿ: ತುಮಕೂರು ಜಿಲ್ಲೆಯ ಶಿರಾ ಬಳಿಯ ಕಳ್ಳಂಬೆಳ್ಳದಲ್ಲಿ ಗುರುವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ 9 ಮಂದಿ ಕೂಲಿ ಕಾರ್ಮಿಕರ ಕುಟುಂಬಸ್ಥರಿಗೆ ಪ್ರಧಾನ ಮಂತ್ರಿ ನೈಸರ್ಗಿಕ ವಿಕೋಪ ಪರಿಹಾರ ನಿಧಿ (PMNRF) ಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. 

ಘಟನೆ ಬಗ್ಗೆ ತೀವ್ರ ಕಂಬನಿ ಮಿಡಿದಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮವರನ್ನು ಕಳೆದುಕೊಂಡವರ ಕುಟುಂಬಸ್ಥರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಘೋಷಿಸಿದ್ದಾರೆ.

ರಾಷ್ಟ್ರಪತಿ ಕಂಬನಿ: ಅಪಘಾತಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ಸಂತಾಪ ಸೂಚಿಸಿದ್ದಾರೆ.

ಸಿಎ ಬೊಮ್ಮಾಯಿ ಸಂತಾಪ: ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸಿಎಂ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನರು ಸಾವಿಗೀಡಾಗಿ ಹಲವರು ಗಾಯಗೊಂಡಿರುವ ವಿಷಯ ತಿಳಿದು ತೀವ್ರ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com