ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿಗೆ ಅವಕಾಶ: ಮೂರು ದಿನ ವಿಗ್ರಹ ಇಡಲು ಅನುಮತಿ

ನಾನಾ ಊಹಾಪೋಹಗಳ ನಡುವೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ರಾಣಿ ಚೆನ್ನಮ್ಮ ವೃತ್ತದ ಬಳಿ ಇರುವ ಕೋಮು ಸೂಕ್ಷ್ಮ ಪ್ರದೇಶ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಸ್ಥಾಪನೆಗೆ ಒಪ್ಪಿಗೆ ನೀಡಿದೆ. ಅನುಮತಿ ಕೋರಿರುವ ಆರು ಸಂಸ್ಥೆಗಳ ಪೈಕಿ ಒಂದಕ್ಕೆ ಮೂರು ದಿನಗಳ ಕಾಲ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಲಾಗುತ್ತದೆ. 
ಗಣೇಶನ ಮೂರ್ತಿಗೆ ಅಂತಿಮ ಸ್ಪರ್ಶ ನೀಡುತ್ತಿರುವ ಕಲಾವಿದೆ
ಗಣೇಶನ ಮೂರ್ತಿಗೆ ಅಂತಿಮ ಸ್ಪರ್ಶ ನೀಡುತ್ತಿರುವ ಕಲಾವಿದೆ

ಹುಬ್ಬಳ್ಳಿ: ನಾನಾ ಊಹಾಪೋಹಗಳ ನಡುವೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ರಾಣಿ ಚೆನ್ನಮ್ಮ ವೃತ್ತದ ಬಳಿ ಇರುವ ಕೋಮು ಸೂಕ್ಷ್ಮ ಪ್ರದೇಶ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಸ್ಥಾಪನೆಗೆ ಒಪ್ಪಿಗೆ ನೀಡಿದೆ. ಅನುಮತಿ ಕೋರಿರುವ ಆರು ಸಂಸ್ಥೆಗಳ ಪೈಕಿ ಒಂದಕ್ಕೆ ಮೂರು ದಿನಗಳ ಕಾಲ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಲಾಗುತ್ತದೆ. 

ಪಾಲಿಕೆ ಈ ನಿರ್ಧಾರಕ್ಕೆ ಬರುವ ಮುನ್ನ ಸರಣಿ ಸಭೆ ನಡೆಸಲಾಗಿತ್ತು. ಈ ಕುರಿತು ನಿರ್ಧರಿಸಲು ಎಚ್‌ಡಿಎಂಸಿ ರಚಿಸಿರುವ ಸದನ ಸಮಿತಿ ನಿನ್ನೆ ಸೋಮವಾರ ಬೆಳಗ್ಗೆ 11 ಗಂಟೆಯೊಳಗೆ ತನ್ನ ವರದಿಯನ್ನು ಸಲ್ಲಿಸಬೇಕಿತ್ತು. ಆದರೆ ಸಮಿತಿಯು ಮಧ್ಯಾಹ್ನ 3 ಗಂಟೆಯವರೆಗೆ ಹೆಚ್ಚು ಜನರಿಗೆ ತಮ್ಮ ಪ್ರಾತಿನಿಧ್ಯ ಸಲ್ಲಿಸಲು ಅವಕಾಶ ನೀಡಿದ್ದರಿಂದ ಹೆಚ್ಚು ಸಮಯ ಹಿಡಿಯಿತು. ಮುಚ್ಚಿದ ಲಕೋಟೆಯಲ್ಲಿ ಸಮಿತಿಯು ವರದಿಯನ್ನು ಮೇಯರ್ ಈರೇಶ್ ಅಂಚಟಗೇರಿ ಅವರಿಗೆ ಹಸ್ತಾಂತರಿಸಿತು.

ಈ ಮಧ್ಯೆ, ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಪ್ರತ್ಯೇಕವಾಗಿ ಸಭೆ ನಡೆಸಿದರು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ನಿವಾಸದಲ್ಲಿ ಬಿಜೆಪಿ ಸಭೆ ನಡೆದರೆ, ಡಿಸಿಸಿ ನಗರ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರ್ ಕಾಂಗ್ರೆಸ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡುವುದಕ್ಕೆ ಕಾಂಗ್ರೆಸ್ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದರಿಂದ ಸಮಿತಿಯ ಸದಸ್ಯರು ಸಭೆಗೆ ಹಾಜರಾಗಲಿಲ್ಲ.

ಸಮಿತಿಯು ತನ್ನ ವರದಿಯನ್ನು ಮೇಯರ್‌ಗೆ ಸಲ್ಲಿಸುವ ಮೊದಲು, ಕಾಂಗ್ರೆಸ್ ಸದಸ್ಯರಾದ ಇಮಾಮಹುಸೇನ್ ಎಲಿಗಾರ ಮತ್ತು ನಿರಂಜನ್ ಹಿರೇಮಠ ಅವರು ಅಂಚಟಗೇರಿಗೆ ಪತ್ರವನ್ನು ಸಲ್ಲಿಸಿದರು, ಸಮಿತಿಯ ಸಂವಿಧಾನದ ಬಗ್ಗೆಯೇ ಆಕ್ಷೇಪಣೆಗಳನ್ನು ಎತ್ತಿದ್ದರು. ತಾವು ಸಮಿತಿಯನ್ನು ವಿರೋಧಿಸುತ್ತಿದ್ದು ಅದು ತೆಗೆದುಕೊಂಡ ನಿರ್ಧಾರಕ್ಕೆ ಬೆಂಬಲವಿಲ್ಲ ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com