ಜೀವ ಬೆದರಿಕೆ ಆರೋಪ: ಸಚಿವ ಆನಂದ್‌ ಸಿಂಗ್‌ ಸೇರಿ 4 ಮಂದಿ ವಿರುದ್ಧ ಪ್ರಕರಣ ದಾಖಲು

ಕುಟುಂಬವೊಂದಕ್ಕೆ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಆನಂದ್‌ ಸಿಂಗ್‌ ಸೇರಿ 4 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ಪೆಟ್ರೋಲ್ ಸುರಿದುಕೊಂಡ ಕುಟುಂಬ
ಪೆಟ್ರೋಲ್ ಸುರಿದುಕೊಂಡ ಕುಟುಂಬ
Updated on

ವಿಜಯನಗರ: ಕುಟುಂಬವೊಂದಕ್ಕೆ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಆನಂದ್‌ ಸಿಂಗ್‌ ಸೇರಿ 4 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಹಾಗೂ ಇತರೆ ಮೂವರ ವಿರುದ್ಧ ಇಲ್ಲಿನ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ರಾತ್ರಿ ಪ್ರಕರಣ ದಾಖಲಾಗಿದೆ. ಡಿ. ಪೋಲಪ್ಪ ಎಂಬುವರು ಕೊಟ್ಟ ದೂರಿನ ಮೇರೆಗೆ ಐ.ಪಿ.ಸಿ. ಸೆಕ್ಷೆನ್‌ 504, 506ರ ಅಡಿ ಎಸ್ಸಿ/ಎಸ್ಟಿ ಕಾಯ್ದೆ ಅನ್ವಯ ಆನಂದ್‌ ಸಿಂಗ್‌, ಮರಿಯಪ್ಪ, ಹನುಮಂತಪ್ಪ ಹಾಗೂ ಹುಲುಗಪ್ಪ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ ಕೆ ತಿಳಿಸಿದ್ದಾರೆ.

‘ಪೆಟ್ರೋಲ್‌ ಹಾಕಿ ಸುಟ್ಟು ಹಾಕುತ್ತೇನೆ’ ಎಂದು ಸಚಿವ ಆನಂದ್‌ ಸಿಂಗ್‌ ಅವರು ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ಪೋಲಪ್ಪ ಅವರು ಅವರ ಕುಟುಂಬದ ಒಂಬತ್ತು ಜನ ಸದಸ್ಯರೊಂದಿಗೆ ಮಂಗಳವಾರ ಸಂಜೆ ನಗರದ ಎಸ್ಪಿ ಕಚೇರಿ ಎದುರು ಮೈಮೇಲೆ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿ ಅವರನ್ನು ತಡೆದು, ಆಸ್ಪತ್ರೆಗೆ ಕಳುಹಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com